ಲಾರಿ ಡಿಕ್ಕಿ ಹೊಡೆದು ಮೂವರ ದುರ್ಮರಣ

239

Get real time updates directly on you device, subscribe now.


ಕೊರಟಗೆರೆ: ಸಂಬಂಧಿಕರೊಬ್ಬರ ತಿಥಿ ಕಾರ್ಯಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಅಸುನೀಗಿರುವ ಧಾರುಣ ಘಟನೆ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.
ಮಧುಗಿರಿ ತಾಲೂಕಿನ ವೀರಣ್ಣನ ಹಳ್ಳಿ ತಾಂಡಾದಿಂದ ಗೌರಿಬಿದನೂರು ತಾಲೂಕಿನ ಉಪ್ಪಾರಹಳ್ಳಿಯಲ್ಲಿನ ಸಂಬಂಧಿಕರ ತಿಥಿ ಕಾರ್ಯಕ್ಕೆ ತೆರಳುವ ವೇಳೆ ಕೊರಟಗೆರೆ ತಾಲ್ಲುಕಿನ ಅರಸಾಪುರ ತಾಂಡದ ಬಳಿ ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರಂತ ನಡೆದಿದೆ.
ಮುಖಾಮುಖಿ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ, ಮೃತರನ್ನು ತಾಯಿ ಅನಿತಮ್ಮ (35), ಮಗ ಬಾಲಾಜಿ (18), ಮೈದುನನ ಮಗ ಪವನ್ ಕುಮಾರ್ (26) ಎಂದು ಗುರ್ತಿಸಲಾಗಿದೆ.
ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ, ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!