ಕೋಡಿಪಾಳ್ಯದ ಕವಿತಾ ನಿಧನ

137

Get real time updates directly on you device, subscribe now.

ಹುಳಿಯಾರು: ಹುಳಿಯಾರು ಸಮೀಪದ ಕೋಡಿಪಾಳ್ಯ ನಿವಾಸಿ ಕವಿತಾ (37) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೋಡಿಪಾಳ್ಯದ ಧ್ಯಾನ ನಗರಿಯ ಮಾತ ಚಾರಿಟಬಲ್ ಟ್ರಸ್ಟ್ ವ್ಯವಸ್ಥಾಪಕಿಯಾಗಿ ಎಲ್ಲರಿಗೂ ಚಿರಪರಿಚಿತರಾಗಿ ನಗುಮುಖದ ಸೇವೆ ಒದಗಿಸುತ್ತಿದ್ದ ಕವಿತಾ ಕಳೆದ ಕೆಲ ತಿಂಗಳಿಂದ ತುರುವೇಕೆರೆ ತಿಪಟೂರು ಕಾಲೇಜಿನಲ್ಲಿ ಎಫ್.ಡಿ.ಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಬುಧವಾರ ಸಂಜೆ ತಮ್ಮ ಮನೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ಕವಿತಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕರೆದೊಯ್ಯಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ, ಹುಳಿಯಾರಿನ ಕೋಡಿಪಾಳ್ಯದಲ್ಲಿ ಗುರುವಾರ ಅಂತ್ಯಕ್ರಿಯೆ ಜರುಗಿತು.

Get real time updates directly on you device, subscribe now.

Comments are closed.

error: Content is protected !!