ವ್ಯಕ್ತಿ ಬರ್ಬರ ಹತ್ಯೆ

205

Get real time updates directly on you device, subscribe now.


ತಿಪಟೂರು: ನಗರದ ಕೆ.ಆರ್.ಬಡಾವಣೆಯ ಮೂರನೇ ಮುಖ್ಯ ರಸ್ತೆಯಲ್ಲಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಹೋಬಳಿ ಹೊಸಕೆರೆ ಮೂಲದ ಮಹೇಂದ್ರ (34) ಎಂಬ ವ್ಯಕ್ತಿಯನ್ನು ರಸ್ತೆಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ.
ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದ್ದು ರಕ್ಷಣೆಗಾಗಿ ಕೂಗಿ ಕೊಳ್ಳುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದು, ಕೊಲೆಗೆ ಸರಿಯಾದ ಮಾಹಿತಿ ದೊರೆತಿಲ್ಲ, ನಗರ ಠಾಣೆ ಪೊಲೀಸರು ಶವವನ್ನು ಸಾರ್ವಜನಿಕ ಆಸ್ಪತ್ರೆ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ, ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಡಿವೈಎಸ್ಪಿ ವಿನಾಯಕ ಶೆಟಗೇರಿ ಭೇಟಿ ನೀಡಿ ಪರಿಶೀಲಿಸಿದರು.

Get real time updates directly on you device, subscribe now.

Comments are closed.

error: Content is protected !!