ಟ್ರ್ಯಾಕ್ಟರ್ ಹರಿದು ಬಾಲಕನ ಸ್ಥಿತಿ ಗಂಭೀರ

96

Get real time updates directly on you device, subscribe now.


ಕೊಡಿಗೇನಹಳ್ಳಿ: 12 ವರ್ಷದ ಮಗು ಸೈಕಲ್ ನಲ್ಲಿ ತೆರಳುತಿದ್ದಾಗ ಟ್ರ್ಯಾಕ್ಟರ್ ಚಾಲಕನ ಅಜಾಗರುಕತೆಯಿಂದ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕನ ಕಾಲಿನ ಮೇಲೆ ಟ್ರ್ಯಾಕ್ಟರ್ ಚಕ್ರ ಹರಿದು ತೀವ್ರ ರಕ್ತಸ್ತ್ರಾವಗಾಗಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಕೆಂಪಾಪುರ- ಚಿಕ್ಕಮಾಲೂರು ಗ್ರಾಮದ ತಿರುವಿನಲ್ಲಿ ಘಟನೆ ಜರುಗಿದ್ದು 12 ವರ್ಷದ ಹರಿಚರಣ್ ಎಂಬ ಬಾಲಕನ ಬಲ ಗಾಲಿಗೆ ಗಂಭೀರ ಗಾಯವಾಗಿದ್ದು ತಕ್ಷಣ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ, ಈ ಬಗ್ಗೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!