ಜನತಾ ದರ್ಶನದ ಅರ್ಜಿ ಶೀಘ್ರ ವಿಲೇವಾರಿ ಮಾಡಿ

57

Get real time updates directly on you device, subscribe now.


ತುಮಕೂರು: ತುಮಕೂರು ನಗರ ಮತ್ತು ಕುಣಿಗಲ್ ಪಟ್ಟಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಐಪಿಜಿಆರ್ ಎಸ್ ಮೂಲಕ ಸ್ವೀಕೃತಿಯಾಗಿರುವ ಅರ್ಜಿಗಳನ್ನು ತಮ್ಮಲ್ಲಿ ಉಳಿಸಿಕೊಳ್ಳದೆ ತ್ವರಿತವಾಗಿ ವಿಲೇವಾರಿ ಮಾಡಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಆಶ್ರಯ ಯೋಜನೆಯಡಿಯಲ್ಲಿ ನಿವೇಶನ ನೀಡಲು ಗುರುತಿಸಲಾಗಿರುವ ಭೂಮಿಯನ್ನು ಲೇಔಟ್ ಆಗಿ ಅಭಿವೃದ್ಧಿಪಡಿಸಲು ಕಾರ್ಯ ನಿರ್ವಹಣಾಧಿಕಾರಿಗಳು ನಗರ ಯೋಜನಾ ವಿಭಾಗಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಹೇಳಿದರು.

ತಹಶೀಲ್ದಾರ್ ಹಂತದಲ್ಲಿರುವ 90 ದಿನಗಳ ಒಳಗಿರುವ ಕೋರ್ಟ್ ಪೆಂಡೆನ್ಸಿ ಪ್ರಕರಣ, ನಮೂನೆ 53 ಮತ್ತು 57ರಲ್ಲಿ ಸ್ವಿಕೃತವಾಗಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕು, ತಾಲ್ಲೂಕು ಮಟ್ಟದಲ್ಲಿ ನಮೂನೆ 53 ಮತ್ತು 57 ಕ್ಕೆ ಸಂಬಂಧಿಸಿದಂತೆ ಕಮಿಟಿ ರಚನೆ ಕುರಿತಂತೆ ಎಲ್ಲಾ ತಹಶೀಲ್ದಾರರು ಮಾಹಿತಿಯನ್ನು ಕೂಡಲೆ ಕೊಡಬೇಕು ಎಂದು ಹೇಳಿದರು.

ಎಲ್ಲಾ ತಹಶೀಲ್ದಾರರು ತಮ್ಮ ಕಚೇರಿಗಳಲ್ಲಿ ಕಡ್ಡಾಯವಾಗಿ ಈ- ಆಫೀಸ್ ತಂತ್ರಾಂಶದ ಮೂಲಕವೇ ಕಡತಗಳನ್ನು ಸ್ವೀಕೃತಿ ಮಾಡಿಕೊಳ್ಳಬೇಕು, ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು, ಯಾವುದೇ ಕಡತಗಳನ್ನು ಭೌತಿಕವಾಗಿ ವಿಲೇವಾರಿ ಮಾಡಬಾರದು ಎಂದು ಹೇಳಿದರು.
ಜಿಲ್ಲೆಯಲ್ಲಿ ಮೂರು ತಿಂಗಳ ಒಳಗೆ ಹೊಸದಾಗಿ ಸೇರ್ಪಡೆಯಾಗಿರುವ ಯುವ ಮತದಾರರ ಮಾಹಿತಿಯನ್ನು ವಿಧಾನಸಭಾ ಕ್ಷೇತ್ರವಾರು ಎಲ್ಲಾ ತಹಶೀಲ್ದಾರ್ ನೀಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಯುವ ಮತದಾರರನ್ನು ಮತಪಟ್ಟಿಗೆ ನೋಂದಾಯಿಸಲು ನವೆಂಬರ್ 18 ಮತ್ತು 19 ರಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ, ಆದರಿಂದ ಎಲ್ಲಾ ಬಿಎಲ್ ಓ ಮತ್ತು ತಹಶೀಲ್ದಾರ್ ತಮ್ಮ ಕಚೇರಿಯಲ್ಲಿ ಹೆಚ್ಚುವರಿಯಾಗಿ ನಮೂನೆ 6, 6ಎ, 6ಬಿ, 7 ಮತ್ತು 8ರ ನಮೂನೆ ಇಟ್ಟುಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!