ಬಿಜೆಪಿ ಪಕ್ಷದಲ್ಲಿಯಾರು ಅಸಮಾಧಾನಿತರಿಲ್ಲ

ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಮಾತನಾಡುವೆ: ಸೋಮಣ್ಣ

88

Get real time updates directly on you device, subscribe now.


ತುಮಕೂರು: ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಬೆಳವಣಿಗೆಗಳಿಂದ ಬೇಸರಗೊಂಡು ಪಕ್ಷದ ಚಟುವಟಿಕೆಯಿಂದ ದೂರ ಉಳಿದಿರುವ ಮಾಜಿ ಸಚಿವ ವಿ.ಸೋಮಣ್ಣ ಡಿ.6ರ ನಂತರ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದರು.
ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ನಂತರ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.7, 8 ಮತ್ತು 9 ರಂದು ಪಕ್ಷದ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ ಅವರೊಂದಿಗೆ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ತಮ್ಮ ಅಭಿಪ್ರಾಯ ಹೇಳಿಕೊಳ್ಳುತ್ತೇವೆ ಎಂದರು.

ನಮ್ಮ ಪಕ್ಷದಲ್ಲಿಯಾರು ಅಸಮಾಧಾನಿತರಿಲ್ಲ, ನಮ್ಮದೇ ಆದತಂಹ ಶಕ್ತಿ, ದೂರದೃಷ್ಟಿಯ ಚಿಂತನೆ ಇದೆ, ಹಾಗಾಗಿ ಡಿ.7, 8 ಮತ್ತು 9 ರಂದು ನಾವೆಲ್ಲರೂ ದೆಹಲಿಗೆ ಹೋಗಿ ಹೈಕಮಾಂಡ್ ಬಳಿ ನಮ್ಮ ಅಭಿಪ್ರಾಯ, ಅನಿಸಿಕೆ ಹೇಳಿಕೊಳ್ಳಲು ನಿರ್ಧಾರ ಮಾಡಿದ್ದೇವೆ ಎಂದರು.
ಶ್ರೀಮಠದ ಆವರಣದಲ್ಲಿ ಗುರುಭವನ ನಿರ್ಮಾಣ ಮಾಡಲು ನಮ್ಮ ಕುಟುಂಬಕ್ಕೆ ಅವಕಾಶ ದೊರೆತಿದ್ದು, ಈ ಕಾರ್ಯ ಪೂರ್ಣಗೊಳಿಸಲಾಗಿದೆ, ಡಿ.6 ರಂದು ಗುರುಭವನ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ, ಡಿ.6 ರಂದು ಗುರುಭವನ ಉದ್ಘಾಟಿಸಿ ಶ್ರೀಮಠಕ್ಕೆ ಹಸ್ತಾಂತರ ಮಾಡಲಾಗುವುದು, ಈ ಗುರು ಭವನ ನಿರ್ಮಾಣ ಮಾಡಲು ನಮ್ಮ ಕುಟುಂಬಕ್ಕೆ ಅವಕಾಶ ಸಿಕ್ಕಿರುವುದು ನಮ್ಮ ಪೂರ್ವ ಜನ್ಮದ ಪುಣ್ಯ ಎಂದರು.

ಗುರುಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಇಬ್ಬರು ಸಚಿವರು, ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸೇರಿದಂತೆ ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಲಿದ್ದಾರೆ, ಈ ಪವಿತ್ರ ಕಾರ್ಯಕ್ರಮಕ್ಕೆ ರಾಜಕೀಯ ಲೇಪನ ಬೆರೆಸುವುದು ಬೇಡ ಎಂದರು.
ಈ ಸಂದರ್ಭದಲ್ಲಿ ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜ್ಯೋತಿಗಣೇಶ್, ಅರುಣ್ ಸೋಮಣ್ಣ, ಶೈಲಜಾ ಸೋಮಣ್ಣ, ಸಿ.ಎಂ.ರಾಜಪ್ಪ, ದಾಸೇಗೌಡ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಶ್ರೀಧರ್, ಪಾಲನೇತ್ರ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ಬಾವಿಕಟ್ಟೆ ನಾಗಣ್ಣ, ಶಿವಪ್ರಸಾದ್, ಸಿದ್ಧಗಂಗಾ ಆಸ್ಪತ್ರೆಯ ಡಾ.ಪರಮೇಶ್ವರ್, ಆರ್.ಬಸವರಾಜು, ಗ್ಯಾಸ್ ಬಾಬು, ಪ್ರಕಾಶ್ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!