ಹಾವು ಕಚ್ಚಿ ಎಂಬಿಬಿಎಸ್ ವಿದ್ಯಾರ್ಥಿ ಸಾವು

66

Get real time updates directly on you device, subscribe now.


ತುಮಕೂರು: ಎಂಬಿಬಿಎಸ್ ಪದವಿ ಮುಗಿಸಿ ಘಟಿಕೋತ್ಸವದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಪದವಿ ಪೂರೈಸಿ ಬುಧವಾರ ನಡೆದ 14ನೇ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಿದ ವಿದ್ಯಾರ್ಥಿ ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಎಂಬುವವರೇ ಮೃತಪಟ್ಟ ದುರ್ದೈವಿ ವಿದ್ಯಾರ್ಥಿ.
ಬುಧವಾರ ನಡೆದ ಘಟಿಕೋತ್ಸವ ಮುಗಿದ ನಂತರ ಹೆಗ್ಗೆರೆ ಬಳಿಯ ಫ್ಲಾಟ್ ಬಳಿ ಕಾರನ್ನು ನಿಲ್ಲಿಸುವ ವೇಳೆ ಹಾವು ಕಚ್ಚಿದ್ದು ಅದನ್ನ ಗಮನಿಸದೆ ಮನೆಗೆ ತೆರಳಿದ ವಿದ್ಯಾರ್ಥಿ ಏಕಾಏಕಿ ಫ್ಲಾಟ್ ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!