ಟ್ರಾಕ್ಟರ್ ಮಗುಚಿ ಬಿದ್ದು ಅರಣ್ಯ ವೀಕ್ಷಕ ಸಾವು

96

Get real time updates directly on you device, subscribe now.


ಕುಣಿಗಲ್: ಹೊಲ ಉಳಮೆ ಮಾಡುವಾಗ ನಡೆದ ಟ್ರಾಕ್ಟರ್ ಅವಘಡದಲ್ಲಿ ಅರಣ್ಯ ವೀಕ್ಷಕ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗೆ ಸಾರ್ವಜನಿಕ ಆಸ್ಪತ್ರೆಗೆ ತಂದಾಗ ಮೃತಪಟ್ಟ ಧಾರುಣ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಮೃತ ಅರಣ್ಯ ವೀಕ್ಷಕನನ್ನು ಕುಣಿಗಲ್ ತಾಲೂಕಿನ ಕೆಂಪಸಾಗರ ಗ್ರಾಮದ ಹಾಲಿ ತಾಲೂಕಿನ ಹುಲಿಯೂರು ದುರ್ಗದ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಅರಣ್ಯವೀಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಮೋಹನ್ ಕುಮಾರ್ (35) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ತಮ್ಮ ಹೊಲದಲ್ಲಿ ಟ್ರಾಕ್ಟರ್ ಮೂಲಕ ಉಳುಮೆ ಮಾಡುವಾಗ ಟ್ರಾಕ್ಟರ್ ಮುಗುಚಿ ಬಿದ್ದು ತೀವ್ರವಾಗಿ ಗಾಯಗೊಂಡರು, ಚಿಕಿತ್ಸೆಗೆ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡುವ ವೇಳೆ ಮೃತಪಟ್ಟರು.

ಮೃತರಿಗೆ ಕಳೆದ ಕೆಲ ತಿಂಗಳ ಹಿಂದೆ ಅರಣ್ಯ ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರಿಂದ ಮುಖ್ಯಮಂತ್ರಿಗಳ ಪದಕ ಲಭಿಸಿದ್ದು, ರಾಜ್ಯದ ಮುಖ್ಯಮಂತ್ರಿಗಳಿಂದಲೆ ಪದಕ ಪಡೆದಿದ್ದರು, ಮೃತರು ಪತ್ನಿ, ಒಂದುವರೆ ವರ್ಷದ ಹೆಣ್ಣು ಮಗು, ಅಪಾರ ಬಂಧು ವರ್ಗವನ್ನು ಅಗಲಿದ್ದು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂಬಂಧಿಕರ ರೋಧನೆ ಮುಗಿಲು ಮುಟ್ಟಿತ್ತು, ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು, ಸ್ವಗ್ರಾಮದಲ್ಲೆ ಶನಿವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು.

Get real time updates directly on you device, subscribe now.

Comments are closed.

error: Content is protected !!