ಸುಳ್ಳಿಗೆ ಮತ್ತೊಂದು ಹೆಸರೇ ಸೋಮಣ್ಣ

ಬಿ ಎಸ್ ವೈ ಬಗ್ಗೆ ಮಾತನಾಡುವ ನೈತಿಕತೆ ಯತ್ನಾಳ್ ಗಿಲ್ಲ: ರೇಣುಕಾಚಾರ್ಯ

60

Get real time updates directly on you device, subscribe now.


ತುಮಕೂರು: ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರನ್ನು ಅಧಿಕಾರದಿಂದ ಇಳಿಸಿದ್ದು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವಾಗಿದೆ, ಅಲ್ಲದೆ ಪಕ್ಷದ ಸೋಲಿಗೆ ಯತ್ನಾಳ್ ನಿರಂತರವಾಗಿ ಮಾತನಾಡಿದ್ದೂ ಒಂದು ಕಾರಣ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಬಗ್ಗೆ ಮಾತನಾಡಲು ನಿಮಗೆ ಯಾವುದೇ ನೈತಿಕತೆ ಇಲ್ಲ, ಯಡಿಯೂರಪ್ಪ ರಾಜೀನಾಮೆ ಕೊಟ್ಟ ಮೇಲೂ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಹಾದಿ- ಬೀದಿಯಲ್ಲಿ ಮಾತನಾಡಿದ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯತ್ನಾಳ್ ಹಿರಿಯರಿದ್ದಾರೆ, ಯತ್ನಾಳ್ ಮೇಲೆ ಗೌರವ ಇದೆ, ಆದ್ರೆ ನೀವು ಆಡಿಯೋ ಮಾಡಿ ಲೀಕ್ ಮಾಡಿದ್ದೀರಲ್ಲ ಎಂದು ಕಿಡಿಕಾರಿದರು.
ಯಡಿಯೂರಪ್ಪರನ್ನು ಇಳಿಸಿದ ಮೇಲೆ ವೀರಶೈವ ಲಿಂಗಾಯತರು ಅಷ್ಟೇ ಅಲ್ಲ, ಎಲ್ಲಾ ವರ್ಗದ ಜನರು ವಿರುದ್ಧ ಆದ್ರು, ಹಾಗಾಗಿ ಸೋಲಬೇಕಾಯಿತು, ಶಿಕಾರಿಪುರದಲ್ಲಿ ವಿಜಯೇಂದ್ರ ಅವರನ್ನು ಸೋಲಿಸಲು ಕೆಲವರು ಷಡ್ಯಂತ್ರ ನಡೆಸಿದ್ರು, ಸ್ವಪಕ್ಷದವರೇ ಷಡ್ಯಂತ್ರ ಮಾಡಿದರು, ಆದರೆ ಶಿಕಾರಿಪುರದ ಜನರ ಆಶೀರ್ವಾದದಿಂದ ವಿಜಯೇಂದ್ರ ಗೆದ್ದರು, ಷಡ್ಯಂತ್ರ ನಡೆಸಿದವರ ಹೆಸರನ್ನ ಮುಂದಿನ ದಿನಗಳಲ್ಲಿ ಹೇಳುವೆ ಎಂದರು.
ಸೋಮಣ್ಣ ಅವರ ಸೋಲಿಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣರಲ್ಲ, ಬಸವರಾಜ ಬೊಮ್ಮಾಯಿ ಅವರನ್ನು ಸೋಲಿಸಬೇಕೆಂದು ವಿಜಯೇಂದ್ರ ಮತ್ತು ಯಡಿಯೂರಪ್ಪ ಎಲ್ಲೂ ಕೂಡ ಪ್ರಯತ್ನ ಮಾಡಿಲ್ಲ, ಗೋವಿಂದರಾಜ ನಗರ ಕ್ಷೇತ್ರದಲ್ಲಿ ಫಲಿತಾಂಶ ತದ್ವಿರುದ್ಧ ಆಗಲಿದೆ ಎಂದು ತಿಳಿದು ಸ್ವತಹ ಸೋಮಣ್ಣ ಅವರೇ ಮೈಸೂರಿಗೆ ಹೋದರು, ಲಿಂಗಾಯತ ನಾಯಕ ರಾಗಬೇಕು ಮತ್ತು ಸಿಎಂ ಆಗಬೇಕೆಂದು ಹಗಲುಗನಸುಗಳ ಕಂಡು ಅಲ್ಲಿಗೆ ಹೋದರು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನ ಹೇಳಿದ್ದಕ್ಕೆ ಸೋಮಣ್ಣ ಅವರಿಗೆ ಅಷ್ಟು ಮತಗಳು ಬಂದಿವೆ, ಸೋಮಣ್ಣ ಮತ್ತು ಯತ್ನಾಳ್ ಇಬ್ಬರ ಮೆದುಳಿಗೂ ನಾಲಿಗೆಗೂ ಲಿಂಕ್ ಇಲ್ಲದಂತೆ ಮಾತನಾಡುತ್ತಾರೆ ಎಂದು ಟೀಕಿಸಿದರು.
ಸೋಮಣ್ಣ ದೆಹಲಿಯ ವರಿಷ್ಠರನ್ನ ಭೇಟಿ ಮಾಡ್ಲಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ, ಆದರೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ವಾಗ್ದಾಳಿ ಮಾಡುವುದು ಸರಿಯಲ್ಲ ಎಂದರು.
ಗೋವಿಂದರಾಜ ನಗರ ಕ್ಷೇತ್ರದಲ್ಲಿ ಸೋಮಣ್ಣ ಸೋಲ್ತಾರೆ ಎನ್ನುವಂಥದ್ದು ಮೊದಲೇ ಗೊತ್ತಿತ್ತು, ಹಾಗಾಗಿ ಸೋಮಣ್ಣ ಬೇರೆ ಕಡೆ ಹೋಗಿ ಸ್ಪರ್ಧೆ ಮಾಡಿದ್ರು, ಕಾಂಗ್ರೆಸ್ ನಲ್ಲಿ ಅವರಿಗೆ ಯಾವುದೇ ಸ್ಥಾನಮಾನ ಕೊಟ್ಟಿರಲಿಲ್ಲ ಬಂದ್ರು, ಯಡಿಯೂರಪ್ಪರ ಕಾಲನ್ನ ಹಿಡಿದುಕೊಂಡು ಕಾಡಿ ಬೇಡಿ ಬಿಜೆಪಿಗೆ ಬಂದ್ರು, ಸೋತ ತಕ್ಷಣ ಕಣ್ಣೀರ್ ಹಾಕ್ತಾ ಇದ್ರು, ಸೋಮಣ್ಣ ಮನೆ ಗೋಗಿ ಯಡಿಯೂರಪ್ಪ ಸಮಾಧಾನ ಮಾಡಿದ್ರು, ಅವರ ಕಣ್ಣೀರು ಒರೆಸಿ ಸಮಾಧಾನ ಮಾಡಿದ್ದು ಯಡಿಯೂರಪ್ಪ ಎಂದರು.

ಸೋಮಣ್ಣ ನೀವು ಮೂಲ ಕಾಂಗ್ರೆಸ್ಸಿಗರು, ನೀವೇನು ಹೋರಾಟ ಮಾಡಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ರಾ, ಸೋಮಣ್ಣ ಸುಳ್ಳಿನಲ್ಲಿ ಭಾರಿ ಮೋಡಿಗಾರ, ಸೋಮಣ್ಣ ಸತ್ಯ ಹರಿಶ್ಚಂದ್ರ ಎನ್ನುವ ಹಾಗೆ ಮಾತಾಡ್ತಾರೆ, ಸುಳ್ಳಿಗೆ ಮತ್ತೊಂದು ಹೆಸರೇ ಸೋಮಣ್ಣ ಅಂತ ಜನ ಮಾತಾಡ್ತಾರೆ ನಾನಲ್ಲ, ಚಾಮರಾಜ ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲುವುದಕ್ಕೆ ಸೋಮಣ್ಣನೇ ಕಾರಣ ಎಂದರು.
ಮುಖಂಡರಾದ ಸದಾಶಿವಯ್ಯ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!