ದತ್ತಪೀಠಕ್ಕೆ 500 ಮಾಲಾಧಾರಿಗಳ ಪಯಣ

39

Get real time updates directly on you device, subscribe now.


ತುಮಕೂರು: ಕಲ್ಪತರುನಾಡು ತುಮಕೂರು ನಗರದಲ್ಲಿ ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠಕ್ಕೆ ಸುಮಾರು 10 ಬಸ್ ಗಳಲ್ಲಿ 500ಕ್ಕೂ ಅಧಿಕ ಮಂದಿ ತೆರಳಿದರು.
ನಗರದಲ್ಲಿ ದತ್ತ ಮಾಲಾಧಾರಿಗಳು ದತ್ತ ಪೀಠಕ್ಕೆ ತೆರಳುವ ಮುನ್ನ ಕುಂಟುಮ್ಮನ ತೋಟದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ನಂತರ ಟೌನ್ ಹಾಲ್ ವೃತ್ತದಲ್ಲಿ ಹಿರೇಮಠಾಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಂಗನಹಳ್ಳಿ ಮಠದ ಬಸವಾನಂದ ಸ್ವಾಮೀಜಿ, ಬೆಳ್ಳಾವಿ ಕಾರದ ಮಠಾಧ್ಯಕ್ಷ ಕಾರದೇಶ್ವರ ಸ್ವಾಮೀಜಿ ಆಶೀರ್ವಾದ ಪಡೆದ ದತ್ತ ಮಾಲಾಧಾರಿಗಳು ನಾಗರಕಟ್ಟೆಗೆ ಪೂಜೆ ಸಲ್ಲಿಸಿದರು.
ದತ್ತಪೀಠಕ್ಕೆ ಪ್ರಯಾಣ ಬೆಳೆಸಿದ ದತ್ತ ಮಾಲಾಧಾರಿಗಳನ್ನು ಶಾಸಕ ಜ್ಯೋತಿಗಣೇಶ್, ಮುಖಂಡರಾದ ಚಿದಾನಂದ್, ಡಾ.ಪರಮೇಶ್ ಮತ್ತಿತರರು ಆತ್ಮೀಯವಾಗಿ ಬೀಳ್ಕೊಟ್ಟರು.

Get real time updates directly on you device, subscribe now.

Comments are closed.

error: Content is protected !!