ಸಚಿವ ಮಧು ಬಂಗಾರಪ್ಪ ಕಾರು ಅಪಘಾತ

30

Get real time updates directly on you device, subscribe now.


ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಸಚಿವರು ಸೇರಿದಂತೆ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಲ್ಲಿನ ಕ್ಯಾತ್ಸಂದ್ರ ಪೊಲೀಸ್ ಠಾಣೆ ಸರಹದ್ದಿನ ನಂದಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ- 48 ರಲ್ಲಿ ತಡರಾತ್ರಿ ನಡೆದಿದೆ.
ರಾತ್ರಿ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು, ಮಾರ್ಗ ಮಧ್ಯೆ ತುಮಕೂರು ಜಿಲ್ಲೆಯ ಗಡಿ ಭಾಗವಾದ ನಂದಿಹಳ್ಳಿ ಬಳಿ ಗುಜರಾತ್ ನಿಂದ ಬೆಂಗಳೂರಿಗೆ ಟೈಲ್ಸ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಕಾರು ಅಪ್ಪಳಿಸಿದೆ.

ಕಾರು ಲಾರಿಗೆ ಅಪ್ಪಳಿಸಿದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ, ಅದೃಷ್ಟವಶಾತ್ ಕಾರಿನಲ್ಲಿದ್ದ ಸಚಿವ ಮಧು ಬಂಗಾರಪ್ಪ ಸೇರಿದಂತೆ ಮೂವರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ,
ಸಚಿವರ ಕಾರು ಅಪಘಾತಕ್ಕೀಡಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕ್ಯಾತ್ಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸಚಿವರು ಬೆಂಗಳೂರಿಗೆ ತೆರಳಲು ಬದಲಿ ಕಾರಿನ ವ್ಯವಸ್ಥೆ ಮಾಡಿಕೊಟ್ಟರು, ನಂತರ ಸಚಿವರು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ತಮ್ಮ ಪ್ರಯಾಣ ಬೆಳೆಸಿದರು. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!