ಬೆಂಕಿ ನಂದಿಸುವಾಗ ಅರಣ್ಯ ಪಾಲಕ ಸಾವು

54

Get real time updates directly on you device, subscribe now.


ಹುಳಿಯಾರು: ಅರಣ್ಯಕ್ಕೆ ಬಿದಿದ್ದ ಬೆಂಕಿ ನಂದಿಸುವಾಗ ಹೊಗೆಯಿಂದ ಉಸಿರುಗಟ್ಟಿ ಹೃದಯಾಘಾತದಿಂದ ಅರಣ್ಯ ಪಾಲಕ ಸಾವನ್ನಪ್ಪಿದ ಘಟನೆ ಹುಳಿಯಾರು ಸಮೀಪದ ಬರಿಗೇಹಳ್ಳಿ ಅರಣ್ಯ ಪ್ರದೇಶದಲ್ಲಿ ಜ.17 ರ ಬುಧವಾರ ಜರುಗಿದೆ.
ಚಿಕ್ಕನಾಯಕನಹಳ್ಳಿ ಪ್ರಾದೇಶಿಕ ವಲಯದ ಬರಿಗೇಹಳ್ಳಿ ಗಸ್ತಿನ ಗಸ್ತು ಅರಣ್ಯ ಪಾಲಕ ಹೆಚ್.ಜಿ.ರೇಣುಕಮೂರ್ತಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ, ಇವರು ಬುಧವಾರ ಬರಿಗೇಹಳ್ಳಿ ಅರಣ್ಯ ಪ್ರದೇಶದಲ್ಲಿ ಇಲಾಖಾ ಸಿಬ್ಬಂದಿಯೊಂದಿಗೆ ಬೆಂಕಿ ನಂದಿಸುತ್ತಿದ್ದ ಸಂದರ್ಭದಲ್ಲಿ ಹೊಗೆಯಿಂದ ಉಸಿರುಗಟ್ಟಿ ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ.

ಮೃತರ ನಿವಾಸಕ್ಕೆ ತುಮಕೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಾರಾವ್, ಚಿಕ್ಕನಾಯಕನಹಳ್ಳಿ ವಲಯ ಅರಣ್ಯಾಧಿಕಾರಿ ಅರುಣ್ ಕುಮಾರ್, ತಿಪಟೂರು ವಲಯ ಅರಣ್ಯಾಧಿಕಾರಿ ಮಧು ಹಾಗೂ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಮೃತರು ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ನಿವಾಸಿಯಾಗಿದ್ದು ತಂದೆ-ತಾಯಿ, ಪತ್ನಿ, 4 ವರ್ಷದ ಒಂದು ಹೆಣ್ಣು ಮಗು ಹಾಗೂ 5 ತಿಂಗಳ ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ, ಮೃತರ ಅಂತ್ಯಕ್ರಿಯೆ ಗುರುವಾರ ನೆರವೇರಿಸಲಾಯಿತು.

Get real time updates directly on you device, subscribe now.

Comments are closed.

error: Content is protected !!