ಬೋನಿಗೆ ಬಿದ್ದ ಕರಡಿ

31

Get real time updates directly on you device, subscribe now.


ಮಧುಗಿರಿ: ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಕರಡಿಯೊಂದು ಸೆರೆ ಸಿಕ್ಕಿದೆ.
ತಾಲ್ಲೂಕಿನ ಮಿಡಗೇಶಿ ಹೋಬಳಿಯ ಮಲ್ಲನಾಯಕನ ಹಳ್ಳಿಯಲ್ಲಿನ ಕೆರೆಯಂಗಳದಲ್ಲಿನ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಮಂಗಳವಾರ ಮಧ್ಯ ರಾತ್ರಿ ಗಂಡು ಕರಡಿ ಸೆರೆಯಾಗಿದೆ.
ಇತ್ತೀಚೆಗೆ ಕರಡಿ ಅಕ್ಕಾ ಪಕ್ಕದ ಜಮೀನುಗಳಲ್ಲಿ ಪ್ರತ್ಯಕ್ಷ ವಾಗುತ್ತಿತ್ತು, ಕರಡಿಯಿಂದ ಭಯ ಭೀತರಾಗಿದ್ದ ಗ್ರಾಮಸ್ಥರು ಕರಡಿ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳನ್ನು ಆಗ್ರಹಿಸಿದ್ದರು.
ಸೆರೆ ಸಿಕ್ಕ ಕರಡಿಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾವನಕ್ಕೆ ಕಳುಹಿಸಿ ಕೊಡಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪ ವಲಯಾರಣ್ಯಾಧಿಕಾರಿ ಮುತ್ತುರಾಜು ಪ್ರದೀಪ್, ಶ್ರೀಧರ್, ಶಿವರಾಜು, ಕೃಷ್ಣಮೂರ್ತಿ, ರಘು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!