ದೇವಸ್ಥಾನದಲ್ಲಿ ಕಳವು

347

Get real time updates directly on you device, subscribe now.

ಕುಣಿಗಲ್: ಊರ ಮಧ್ಯೆ ಇರುವ ದೇವಾಲಯದ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ದೇವಾಲಯದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳುವು ಮಾಡಿರುವ ಘಟನೆ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಟ್ಟಹಳ್ಳಿ ಗ್ರಾಮದ ಮಧ್ಯಭಾಗದಲ್ಲಿ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ ಇದ್ದು, ತಡರಾತ್ರಿ ದೇವಾಲಯ ಬಾಗಿಲು ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಆರು ಕೆಜಿ ಬೆಳ್ಳಿಯ ಸ್ವಾಮಿಯ ವಿಗ್ರಹ ಮುಖವಾಡ, ಪ್ರಭಾವಳಿ, 30 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ದೇವಾಲಯದ ಅರ್ಚಕ ನೀಡಿದ ದೂರಿನ ಮೇರೆಗೆ ಅಮೃತೂರು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!