ಭೀಕರ ಅಪಘಾತದಲ್ಲಿ ಇಬ್ಬರು ಸಾವು

26

Get real time updates directly on you device, subscribe now.


ಕುಣಿಗಲ್: ಸರಕು ಸಾಗಾಣೆ ವಾಹನ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಒಬ್ಬರು ತೀವ್ರವಾಗಿ ಗಾಯಗೊಂಡಿರುವ ಧಾರುಣ ಘಟನೆ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 75 ಬೈಪಾಸ್ ರಸ್ತೆಯ ಬಿದನಗೆರೆ ಗ್ರಾಮದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಕಾರಿನಲ್ಲಿದ್ದ ಶ್ರವಣಬೆಳಗೊಳ ಸಮೀಪದ ಗುಳ್ಳಹಳ್ಳಿಯ ಅಣ್ಣೇಗೌಡ (38), ಕೆ.ಆರ್.ಪೇಟೆ ತಾಲ್ಲೂಕಿನ ನಾಯಸಿಂಗನಹಳ್ಳಿಯ ಕಾರು ಚಾಲಕ ನಿರಂಜನ (36) ಎಂದು ಗುರುತಿಸಲಾಗಿದೆ, ಮತ್ತೋರ್ವ ಅಣ್ಣೇಗೌಡನ ಸಂಬಂಧ ಸ್ವಾಮಿ(39) ಗಂಭೀರವಾಗಿ ಗಾಯಗೊಂಡಿದ್ದಾರೆ, ಸ್ವಿಫ್ಟ್ ಡಿಸೈರ್ ಕಾರು ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದು, ಬೆಂಗಳೂರು ಕಡೆಯಿಂದ ಹಾಸನಕ್ಕೆ ತೆರಳುತ್ತಿದ್ದ ಟಾಟಾ ಸರಕು ಸಾಗಾಣೆ ವಾಹನ ಚಾಲಕನ ಅತಿವೇಗದ ಪರಿಣಾಮ ಡಿವೈಡರ್ ಹಾರಿ ಮತ್ತೊಂದು ಬದಿಯಿಂದ ಬರುತ್ತಿದ್ದ ಡಿಸೈರ್ ಕಾರಿಗೆ ಅಪ್ಪಳಿಸಿದ ಪರಿಣಾಮ ಅಪಘಾತ ಸಂಭವಿಸಿದೆ, ಕುಣಿಗಲ್ ಸಿಪಿಐ ನವೀನ್ ಗೌಡ ಸಿಬ್ಬಂದಿ, ಸ್ಥಳಕ್ಕೆ ತೆರಳಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಆದಿಚುಂಚನಗಿರಿ ಆಸ್ಪತ್ರೆಗೆ ಕಳಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!