ಕಾರು ಅಪಘಾತ: ಇಬ್ಬರು ಸ್ಥಳದಲ್ಲಿಯೇ ಸಾವು

ಕೋಳಾಲ ಹೋಬಳಿ ವ್ಯಾಪ್ತಿಯಲ್ಲಿ ಘಟನೆ

595

Get real time updates directly on you device, subscribe now.


ಕೊರಟಗೆರೆ: ದೊಡ್ಡಸಾಗ್ಗೆರೆ-ಮಾವತ್ತೂರು ರಸ್ತೆಯಲ್ಲಿ ಕಾರು ವೇಗವಾಗಿ ಚಲಿಸುವಾಗ ತಿರುವಿನಲ್ಲಿ ಆಕಸ್ಮಿಕವಾಗಿ ಅರಳಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಡರಾತ್ರಿ ಜರುಗಿದೆ.
ಕೊರಟಗೆರೆತಾಲೂಕು ಕೋಳಾಲ ಹೋಬಳಿ ವ್ಯಾಪ್ತಿಯ ಮಾವತ್ತೂರು – ದೊಡ್ಡಸಾಗ್ಗೆರೆ ಮಧ್ಯೆಯ ರಸ್ತೆ ಬಳಿಯ ಅರಸಮ್ಮದೇವಾಲಯ ಸಮೀಪ ಅಪಘಾತವಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಹ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕಂಬದಹಳ್ಳಿ ವಾಸಿಯಾದ ನರಸಿಂಹರಾಜು (51) ಮತ್ತು ಬಾಗೇಪಳ್ಳಿಯ ಶ್ರೀನಿವಾರರೆಡ್ಡಿ(54) ಕಾರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಆಗಿದ್ದಾರೆ. ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಳಾಲ ಪೊಲೀಸ್‌ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!