ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸೋಣ

21

Get real time updates directly on you device, subscribe now.


ತುಮಕೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರ್ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದಲ್ಲಿ ಬಿಎಲ್ಎ 1 ಮತ್ತು ಬಿಎಲ್ಎ 2 ಅವರ ಕಾರ್ಯ ವೈಖರಿ ಕುರಿತ ಮಾಹಿತಿ ಒಳಗೊಂಡ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ, ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಾಲಿಗೆ ಅತ್ಯಂತ ಕಠಿಣ ಪರೀಕ್ಷೆಯಾಗಿದೆ, ಇದನ್ನು ಪಾಸು ಮಾಡಬೇಕೆಂದರೆ ಮುಖಂಡರೊಂದಿಗೆ ಕಾರ್ಯಕರ್ತರು, ಅದರಲ್ಲಿಯೂ ಬೂತ್ ಮಟ್ಟದ ಏಜೆಂಟ್ ಗಳು, ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕಿದೆ, ಈ ನಿಟ್ಟಿನಲ್ಲಿ ಬಿಎಲ್ ಎ ಗಳ ಪಾತ್ರ ಏನು, ಹೇಗೆ ಕಾರ್ಯ ನಿರ್ವಹಿಸಬೇಕು ಎಂಬ ವಿಚಾರವಾಗಿ ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಯಿತು.

ಚುನಾವಣಾ ಪೂರ್ವದಲ್ಲಿ ಮತದಾರರನಿಗೆ ನೀಡಿದ್ದ ವಾಗ್ದಾನ ಈಡೇರಿಸಲು ನಮ್ಮ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಸಹಕಾರಿ ಸಚಿವರು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ, ಅವರ ಕೈ ಬಲಪಡಿಸಿದರೆ ಮಾತ್ರ ಪಕ್ಷ ಮತ್ತಷ್ಟು ಶಕ್ತಿ ಪಡೆದುಕೊಂಡು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟವನ್ನು ಸಮರ್ಥವಾಗಿ ಎದುರಿಸಲು ಸಾಧ್ಯ, ಲೋಕಸಭಾ ಚುನಾವಣೆಯಲ್ಲದೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿಯೂ ಪಕ್ಷ ಅತಿ ಹೆಚ್ಚು ಸ್ಥಾನ ಗೆದ್ದು ಅಧಿಕಾರ ಹಿಡಿಯಬೇಕಿದೆ, ಹಾಗಾಗಿ ಎಲ್ಲರೂ ಸಕ್ರಿಯವಾಗಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಜನರಿಗೆ ಮಾಹಿತಿ ನೀಡಬೇಕೆಂದು ತೀರ್ಮಾನ ಮಾಡಲಾಯಿತು.

ವಿಧಾನಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಪಿ.ಆರ್.ರಮೇಶ್ ಮಾತನಾಡಿ, ಬಿಎಲ್ಎ ಗಳೆಂದರೆ ಮತದಾನದ ದಿನ ಬೂತ್ಗಳಲ್ಲಿ ಪಕ್ಷದ ಪರವಾಗಿ ಕುಳಿತುಕೊಳ್ಳುವ ಏಜೆಂಟರಲ್ಲ, ಅವರು ಮತದಾರರು ಮತ್ತು ಪಕ್ಷದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಅತ್ಯಂತ ಜವಾಬ್ದಾರಿಯುತ ಹುದ್ದೆಯಾಗಿದೆ, ಮಾಸ್ ಪಾರ್ಟಿಯಾಗಿರುವ ಕಾಂಗ್ರೆಸ್ ನ್ನು ಕೇಡರ್ ಬೇಸ್ ಪಾರ್ಟಿಯಾಗಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರಂತರ ಪ್ರಯತ್ನ ನಡೆಸಿದ್ದಾರೆ, ಇದರ ಫಲವಾಗಿ ಎಲ್ಲಾ ಬೂತ್ ಮಟ್ಟದ ಏಜೆಂಟರನ್ನು ಸಕ್ರಿಯವಾಗಿ ಕಾರ್ಯ ನಿರ್ವಹಿಸುವಂತೆ ಹುರಿದುಂಬಿಸುವುದು, ಅವರ ಮೂಲಕ ಆ ಬೂತ್ ಮಟ್ಟದಲ್ಲಿರುವ ಸಮಸ್ಯೆ ಅರಿತು ಪರಿಹಾರ ಒದಗಿಸುವ ಕೆಲಸಕ್ಕೆ ಮುಂದಾಗಿದ್ದಾರೆ., ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುವ ಬೂತ್ ಮಟ್ಟದ ಏಜೆಂಟರಿಗೆ ಪಕ್ಷದ ಹುದ್ದೆಗಳಲ್ಲದೆ ಸರಕಾರದ ನೇಮಕಾತಿಗಳಲ್ಲಿ, ಮುಂಬರುವ ಜಿಪಂ, ತಾಪಂ ಚುನಾವಣೆಗಳಲ್ಲಿ ಸ್ಪರ್ಧಿಸಲೂ ಸಹ ಅವಕಾಶಗಳು ದೊರೆಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ, ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಈ ಬೂತ್ ಮಟ್ಟದ ಏಜೆಂಟ್ ರ ಸಭೆ ಆಯೋಜಿಸಲಾಗಿದೆ, ಇಲ್ಲಿ ಪಕ್ಷದ ಕಾರ್ಯಕರ್ತರ ಕುಂದುಕೊರತೆ ಜೊತೆಗೆ ಆಯಾಯ ಬೂತ್ ಮಟ್ಟದ ಕುಂದು ಕೊರತೆಗಳ ನಿವಾರಣೆ ಮತ್ತು ಮತದಾರರ ಪಟ್ಟಿ ಪರೀಕ್ಷರಣೆ ವೇಳೆ ಬಿಎಲ್ ಎ ಗಳುಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂಬ ಪ್ರಮುಖ ವಿಚಾರ ಚರ್ಚೆಯಾಗಲಿದೆ, ಇಂದಿನ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು ಭಾಗವಹಿಸಿದ್ದಾರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದಕ್ಕೆ ಇದೊಂದು ಒಳ್ಳೆಯ ವೇದಿಕೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಕೆಪಿಸಿಸಿ ಸದಸ್ಯ ಮುನೀರ್ ಅಹಮದ್, ಮಾಜಿ ಶಾಸಕರಾದ ಗಂಗಹನುಮಯ್ಯ, ಡಾ.ರಫಿಕ್ ಅಹಮದ್, ಮುಖಂಡರಾದ ಇಕ್ಬಾಲ್ ಅಹಮದ್, ಆತೀಕ್ ಅಹಮದ್, ಷಣ್ಮುಖಪ್ಪ, ನರಸಿಂಹಯ್ಯ, ಬಿ.ಜಿ.ಲಿಂಗರಾಜು, ಹಾಲೆನೂರು ಲೇಪಾಕ್ಷ, ಹೆಬ್ಬೂರು ಶ್ರೀನಿವಾಸ್, ನಾಗಮಣಿ, ಸಂಜೀವಕುಮಾರ್, ರಂಗಸ್ವಾಮಯ್ಯ, ಸುಜಾತ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!