ತುಮಕೂರು: ಜಿಲ್ಲೆಯ 11 ತಾಲ್ಲೂಕುಗಳಲ್ಲಿಯೂ ಕಾರ್ಯನಿರ್ವಹಿಸುತ್ತಿರುವ 5 ಸಾವಿರಕ್ಕೂ ಹೆಚ್ಚು ಬೀದಿಬದಿ ವ್ಯಾಪಾರಿಗಳಿಗೆ ನಿವೇಶನವನ್ನು ಒದಗಿಸುವಂತೆ ವಸತಿ ಮತ್ತು ವಕ್ಫ್ ಸಚಿವರಾದ ಜಮೀರ್ ಅಹಮದ್ ಖಾನ್ ಅವರಿಗೆ ತುಮಕೂರು ಜಿಲ್ಲಾ ಫುಟ್ ಪಾತ್ ವ್ಯಾಪಾರಿಗಳ ಸಂಘ ಸಿಐಟಿಯು ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆ ವಿಧಾನ ಮಂಡಲ ಕಲಾಪ ವೀಕ್ಷಣೆ ಅವಕಾಶ ಕಲ್ಪಿಸಿದ್ದ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ತೆರಳಿದ್ದ ಫುಟ್ ಪಾತ್ ವ್ಯಾಪಾರಿ ಸಂಘದ ಪದಾಧಿಕಾರಿಗಳು ಕಲಾಪ ವೀಕ್ಷಣೆ ನಂತರ ಸಚಿವರಿಗೆ ಮನವಿ ಸಲ್ಲಿಸಿ, ಕಡಿಮೆ ವೆಚ್ಚದಲ್ಲಿ ದಿನಬಳಕೆ ವಸ್ತುಗಳನ್ನು ಕಡಿಮೆದರದಲ್ಲಿ ಮಾರಾಟ ಮಾಡುತ್ತಿರುವ ಬೀದಿಬದಿ ವ್ಯಾಪಾರಿಗಳ ಹಿತಾಸಕ್ತಿ ಕಾಪಾಡಲು ಮುಂದಾಗಬೇಕೆಂದು ಮನವಿ ಸಲ್ಲಿಸಿದರು.
ಈ ವೇಳೆ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಫೌಂಡೇಶನ್ ಸಿಐಟಿಯುನ ಚಂದ್ರಶೇಖರಮೂರ್ತಿ, ಬಸಮ್ಮ, ಎನ್.ಕೆ.ಸುಬ್ರಮಣ್ಯ, ಸೈಯದ್ ಮುಜೀಬ್, ವಸೀಂಅಕ್ರಂ, ಎಚ್.ಕೆ.ರವಿಕುಮಾರ್, ಮುತ್ತುರಾಜು, ತುರುವೇಕೆರೆ ಅಧ್ಯಕ್ಷ ಮಾರುತಿ ಸೇರಿದಂತೆ ಇತರರಿದ್ದರು.
Comments are closed.