ಆಕಸ್ಮಿಕ ಬೆಂಕಿ- ಮೇವು ಭಸ್ಮ

15

Get real time updates directly on you device, subscribe now.


ಕೊಡಿಗೇನಹಳ್ಳಿ: ಒಂದೆ ದಿನ 3 ರೈತರಿಗೆ ಸೇರಿದ ಬಣವೆಗೆ ಆಕಸ್ಮಿಕ ಬೆಂಕಿ ಬಿದ್ದು ಜಾನುವಾರುಗಳ ಮೇವು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿಯ ದೊಡ್ಡಹೊಸಹಳ್ಳಿ ಗ್ರಾಮದ ಸರೋಜಮ್ಮ ಸರಸ್ವತಮ್ಮ ಎಂಬುವವರು ರಾಸುಗಳಿಗೆ ರಾಗಿ ಹುಲ್ಲು ಶೇಖರಿಸಿದ್ದರು, ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸುಮಾರು 1 ಲಕ್ಷ ಮೌಲ್ಯದ ಮೇವು ಬೆಂಕಿ ಕೆನ್ನಾಲಿಗೆಗೆ ಧಗಧಗಿಸಿದೆ, ತಕ್ಷಣ ಸ್ಥಳೀಯರು ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದ್ದು ಅಗ್ನಿ ಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲಿ ಮೇವು ಸಂಪೂರ್ಣ ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ಪಿಎಸೈ ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!