ರೈಲ್ವೆ ನಿಲ್ದಾಣದಲ್ಲಿ ಸಿದ್ದಾರ್ಥ ಕ್ಲಿನಿಕ್ ಲೋಕಾರ್ಪಣೆ

9

Get real time updates directly on you device, subscribe now.


ತುಮಕೂರು: ರೈಲ್ವೆ ನಿಲ್ದಾಣದಲ್ಲಿ ಆಗುವ ಅವಘಡಗಳಿಗೆ ತುರ್ತು ಸೂಕ್ತ ಚಿಕಿತ್ಸೆ ನೀಡುವ ಸಲುವಾಗಿ ರೈಲ್ವೆ ನಿಲ್ದಾಣದಲ್ಲಿ ತೆರೆದಿರುವ ಸಿದ್ದಾರ್ಥ ಕ್ಲಿನಿಕ್ ಜನರಿಗೆ ಸಹಕಾರಿಯಾಗಲಿದೆ ಎಂದು ಸಾಹೇ ವಿಶ್ವ ವಿದ್ಯಾಲಯದ ಕುಲಾಧಿಪತಿ, ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿಪರಮೇಶ್ವರ ತಿಳಿಸಿದರು.

ನಗರದ ರೈಲ್ವೆ ನಿಲ್ದಾಣದಲ್ಲಿ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ವತಿಯಿಂದ ಆರಂಭಿಸಲಾದ ತುರ್ತು ಚಿಕಿತ್ಸೆ ಕೇಂದ್ರ ಲೋಕಾರ್ಪಣೆಗೊಳಿಸಿ ಮಾತನಾಡಿ, ತುಮಕೂರು ರೈಲ್ವೆ ನಿಲ್ದಾಣದ ಆಜುಬಾಜಿನಲ್ಲಿ ಆಗುವ ಅಪಘಾತ ಸೇರಿದಂತೆ ಇತರೆ ಸಮಸ್ಯೆ ಜರುಗಿದಾಗ ತುರ್ತು ಚಿಕಿತ್ಸೆ ದೊರೆಯಲಿ ಎಂಬ ಆಶಯದಿಂದ ಶ್ರೀಸಿದ್ದಾರ್ಥ ವೈದ್ಯಕೀಯ ಮಹಾ ವಿದ್ಯಾಲಯದ ಆಶ್ರಯದಲ್ಲಿ ಸಿದ್ದಾರ್ಥ ತುರ್ತು ಚಿಕಿತ್ಸೆ ಘಟಕ ತೆರೆಯಲಾಗಿದೆ ಎಂದರು.
ಅಪಘಾತಗಳಾದಾಗ ಮನುಷ್ಯನಿಗೆ ಚಿಕಿತ್ಸೆ ಅತಿ ಮುಖ್ಯವಾಗಿದ್ದು ಇಂತಹ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಕೇಂದ್ರ ಅವಶ್ಯಕತೆ ಇರುತ್ತದೆ, ಈ ನಿಟ್ಟಿನಲ್ಲಿ ರೈಲ್ವೆ ಪ್ರಯಾಣಿಕರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಚಿಕಿತ್ಸಾ ಕೇಂದ್ರದಲ್ಲಿ ಎಮರ್ಜೆನ್ಸಿ ಡಾಕ್ಟರ್ ಜೊತೆಗೆ ಶುಶ್ರೂಶಕಿಯರು, ಔಷಧಿಗಳು ಸೇರಿದಂತೆ ಒಂದು ಆ್ಯಂಬುಲೆನ್ಸ್ ಕೂಡ ಲಭ್ಯವಿರಲಿದೆ ಎಂದು ಹೇಳಿದರು.

ಜನರ ಅಗತ್ಯತೆಗಳಿಗೆ ಜವಾಬ್ದಾರಿಯುತ ಮತ್ತು ಸ್ಪಂದಿಸುವ ಸಮಾನ, ಕೈಗೆಟುಕುವ ಮತ್ತು ಗುಣಮಟ್ಟದ ಆರೋಗ್ಯ ಸೇವೆಗೆ ಮುಂದಾಗುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದರು.
ಸಾರ್ವಜನಿಕ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯ ಜನರಿಗೆ ತಲುಪಬೇಕು, ಅದೇ ರೀತಿ ಸಾವಿರಾರು ಜನ ದಿನನಿತ್ಯ ಪ್ರಯಾಣಿಸುವ ರೈಲ್ವೆ ನಿಲ್ದಾಣದಲ್ಲಿ ಪ್ರಾಥಮಿಕ ಮಟ್ಟದ ಸೇವಾ ಕೇಂದ್ರ ಇರಬೇಕೆಂಬ ಆಶಯದಿಂದ ರೈಲ್ವೆ ಇಲಾಖೆ ಸಹಕಾರದಿಂದ ಸಿದ್ದಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ಈ ಘಟಕ ತೆರೆಯಲಾಗಿದೆ ಎಂದರು.

ತುರ್ತು ಚಿಕಿತ್ಸಾ ಕೊಠಡಿ ಲೋಕಾರ್ಪಣೆ ವೇಳೆ ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವ್ಯವಸ್ಥಾಪಕ ಯೋಗೇಶ್ ಮೋಹನ್, ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಕನ್ನಿಕಾ ಪರಮೇಶ್ವರ, ಸಾಹೇ ವಿವಿ ಉಪ ಕುಲಪತಿ ಡಾ.ಬಿ.ಕೆ.ಲಿಂಗೇಗೌಡ, ರಿಜಿಸ್ಟ್ರಾರ್ ಎಂ.ಜೆಡ್.ಕುರಿಯನ್, ಕುಲಾಧಿಪತಿಗಳ ಸಲಹೆಗಾರ ಡಾ.ವಿವೇಕ್ ವೀರಯ್ಯ, ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಾಣಿಕೊಪ್ಪ, ಡಾ.ಪ್ರವೀಣ್ ಕುಡುವಾ, ಉಪ ಪ್ರಾಂಶುಪಾಲ ಡಾ.ಪ್ರಭಾಕರ್ ಸೇರಿದಂತೆ ಜಿಲ್ಲಾ ಪಂಚಾಯಿತಿ ಸಿಇಓ ಜಿ.ಪ್ರಭು, ಎಸ್ಪಿ ಅಶೋಕ್ ವೆಂಕಟ್, ಮಹಾನಗರ ಪಾಲಿಕೆ ಆಯುಕ್ತರಾದ ಅಶ್ವಿಜಾ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!