ಬಸ್ ಗೆ ಆಟೋ ಡಿಕ್ಕಿ- ಚಾಲಕನಿಗೆ ಗಾಯ

21

Get real time updates directly on you device, subscribe now.


ಕೊರಟಗೆರೆ: ಆಟೋ ಚಾಲಕನ ಅಜಾಗರುಕತೆಯಿಂದ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು ಈ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಪಟ್ಟಣದ ರಾಜ್ಯ ಹೆದ್ದಾರಿಯ ಸುವರ್ಣಮುಖಿ ಪೆಟ್ರೋಲ್ ಬಂಕ್ ಬಳಿ ಟ್ರಾಫಿಕ್ ರೂಲ್ಸ್ ಉಲ್ಲಂಸಿ ಆಟೋ ಚಾಲಕನು ವೇಗವಾಗಿ ಬಂದ ಕಾರಣ ಸರಕಾರಿ ಬಸ್ಗೆ ಡಿಕ್ಕಿ ಹೊಡೆದಿದ್ದು ಗಾಯಾಳುವನ್ನು ಸ್ಥಳೀಯರು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಿದ್ದು ಅಪಘಾತದಲ್ಲಿ ಬಸ್ನಲ್ಲಿದ್ದ 40ಕ್ಕೂ ಹೆಚ್ಚಿನ ಪ್ರಯಾಣಿಕರು ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಧುಗಿರಿ ತಾಲೂಕಿನ ಬೂದೇನಹಳ್ಳಿ ಗ್ರಾಮದ ಆಟೋ ಚಾಲಕ ರಾಮಾಂಜಿ (40) ಎಂಬಾತನೇ ಗಾಯಾಳು ಆಗಿದ್ದು, ಪಟ್ಟಣದಲ್ಲಿ ಸಂಚರಿಸುವ ವಾಹನಗಳಿಗೆ ಟ್ರಾಫಿಕ್ ರೂಲ್ಸ್ ಭಯವೇ ಇಲ್ಲದಂತೆ ಮನಸ್ಸಿಗೆ ಬಂದ ಹಾಗೆ ಸಂಚರಿಸುತ್ತವೆ, ಸಾರಿಗೆ ಇಲಾಖೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಸ್ಥಳಕ್ಕೆ ಸಿಪಿಐ ಅನಿಲ್, ಪಿಎಸ್ ಐ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!