ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆ

ಕೆರೆಯ ಅಂಗಳದಲ್ಲಿ ಕಾರು ಭಸ್ಮ- ಕುಚ್ಚಂಗಿಯಲ್ಲಿ ಘಟನೆ

33

Get real time updates directly on you device, subscribe now.


ತುಮಕೂರು: ಕೆರೆಯ ಅಂಗಳದಲ್ಲಿ ಕಾರೊಂದು ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಮೃತ ದೇಹ ಪತ್ತೆಯಾಗಿವೆ, ಈ ಘಟನೆ ತುಮಕೂರು ತಾಲ್ಲೂಕು ಕೋರಾ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಡೆದಿದೆ, ಮೃತ ದೇಹಗಳ ಗುರುತು ಪತ್ತೆಯಾಗಿಲ್ಲ.
ಕಾರು ದಕ್ಷಿಣ ಕನ್ನಡದ ಬೆಳ್ತಂಗಡಿಯ ರಫಿಕ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ, ಕಳೆದ ರಾತ್ರಿ ಕಾರಿಗೆ ಬೆಂಕಿ ಹಚ್ಚಿರುಬಹುದು ಎನ್ನಲಾಗಿದೆ.
ಮೂವರನ್ನು ಕೊಲೆ ಮಾಡಿ ಕಾರಿಗೆ ಹಾಕಿ ನಂತರ ಕಾರಿಗೆ ಬೆಂಕಿ ಹಚ್ಚಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ನಿಗೂಡವಾಗಿದ್ದು, ದಕ್ಷಿಣ ಕನ್ನಡದ ಕಾರು ಇಲ್ಲಿಗೆ ಏಕೆ ಬಂತು, ಕಾರಲ್ಲಿ ಇದ್ದವರು ಯಾರು, ಸುಟ್ಟು ಹೋಗಿರುವವರ ಯಾರು ಎಂಬ ಪ್ರಶ್ನೆ ಎದುರಾಗಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದಾರೆ, ಮೃತ ದೇಹಗಳ ಮತ್ತೆಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದು, ಸಂಪೂರ್ಣ ತನಿಖೆಯಿಂದಷ್ಟೆ ಈ ಘಟನೆಯ ಹಿಂದಿನ ಸತ್ಯಾಂಶ ಹೊರ ಬೀಳಲಿದೆ.

Get real time updates directly on you device, subscribe now.

Comments are closed.

error: Content is protected !!