ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

23

Get real time updates directly on you device, subscribe now.


ಮಧುಗಿರಿ: ತನ್ನಅಕ್ಕನನ್ನು ಚುಡಾಯಿಸುತ್ತಿದ್ದನೆಂಬ ಕಾರಣದಿಂದಾಗಿ ಯುವಕನೊಬ್ಬನ ಮೇಲೆ ಮಾರಣಾಂತಿಕವಾಗಿ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ತಾಲೂಕಿನ ಮಿಡಿಗೇಶಿ ಹೋಬಳಿಯ ಕಾರೆನಹಳ್ಳಿ ಗ್ರಾಮದ ಜಮೀನಿನೊಂದರಲ್ಲಿ ಘಟನೆ ನಡೆದಿದ್ದು ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗ್ರಾಮದ ನಾಗರಾಜು.ಕೆ.ಟಿ. (35) ಬಹಿರ್ದೆಸೆಗೆ ತೆರಳಿದ್ದಾಗ ಆರೋಪಿ ರವಿಕುಮಾರ್ (21) ನಾಗರಾಜುವಿನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ನಾಗರಾಜುನ ಮೇಲೆ ಚಿರತೆಯೊ , ಕರಡಿಯೊ ದಾಳಿ ನಡೆಸಿವೆ ಎಂದು ಸ್ಥಳೀಯರು ಭಾವಿಸಿ ಹೊಸಕೆರೆಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು.
ವಿಷಯ ತಿಳಿದ ಮಿಡಿಗೇಶಿ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ಘಟನಾ ಸ್ಥಳಕ್ಕೆ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಆರೋಪಿಯನ್ನು ಅನುಮಾನದಿಂದ ಪ್ರಶ್ನಿಸಿದಾಗ ಘಟನೆಯ ಬಗ್ಗೆ ರವಿಕುಮಾರ್ ಮಾಹಿತಿ ನೀಡಿದ್ದಾನೆ.
ಸದ್ಯ ಆರೋಪಿ ಪೊಲೀಸರ ಅತಿಥಿಯಾಗಿದ್ದು ಹಲ್ಲೆಗೊಳಗಾದ ನಾಗರಾಜುನನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.

Get real time updates directly on you device, subscribe now.

Comments are closed.

error: Content is protected !!