ಮಾರತಹಳ್ಳಿಯಲ್ಲಿ ಕಾವೇರಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ

ಕಾವೇರಿ ಆಸ್ಪತ್ರೆ ಚೆನ್ನಾಗಿ ಬೆಳೆಯಲಿ, ಜನರಿಗೆ ಉತ್ತಮ ಸೇವೆ ದೊರೆಯಲಿ: ಸಿದ್ದರಾಮಯ್ಯ

33

Get real time updates directly on you device, subscribe now.


ಬೆಂಗಳೂರು: ನಗರದಲ್ಲಿ ನೂತನವಾಗಿ ಆರಂಭವಾಗಿರುವ ಕಾವೇರಿ ಆಸ್ಪತ್ರೆ ಜನರಿಗೆ ಉತ್ತಮ ಸೇವೆ ನೀಡುತ್ತಾ ಇನ್ನಷ್ಟು ಚೆನ್ನಾಗಿ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.
ಶನಿವಾರ ಮಾರತಹಳ್ಳಿಯಲ್ಲಿ ಕಾವೇರಿ ಆಸ್ಪತ್ರೆ ಸಮೂಹದ ನೂತನ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿ, ದಕ್ಷಿಣ ಭಾರತದ ವಿವಿಧ ನಗರಗಳಲ್ಲಿ ಉತ್ತಮ ಸೇವೆ ನೀಡುತ್ತಿರುವ ಕಾವೇರಿ ಆಸ್ಪತ್ರೆಯನ್ನು ಬೆಂಗಳೂರಿನಲ್ಲಿ ಉದ್ಘಾಟಿಸುತ್ತಿರುವುದಕ್ಕೆ ಸಂತೋಷವಾಗಿದೆ, ಉತ್ತಮ ಆರೋಗ್ಯ ಸೇವೆ ನೀಡುತ್ತಾ ಈ ಆಸ್ಪತ್ರೆ ಇನ್ನು ಚೆನ್ನಾಗಿ ಬೆಳೆಯಲಿ, ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿ, ಮುಂದಿನ ದಿನಗಳಲ್ಲಿ ಇನ್ನೂ ಎರಡು ಆಸ್ಪತ್ರೆಗಳನ್ನು ಆರಂಭಿಸುವ ಯೋಜನೆಯನ್ನು ಈ ಸಮೂಹದ ಆಸ್ಪತ್ರೆ ಹೊಂದಿದೆ ಎಂದು ಗೊತ್ತಾಗಿದೆ, ಮುಂದಿನ ಎಲ್ಲಾ ಯೋಜನೆಗಳಿಗೂ ಒಳಿತಾಗಲಿ ಎಂದು ಶುಭ ಹಾರೈಸಿದರು.

ಕಾವೇರಿ ಆಸ್ಪತ್ರೆಯ ಸಂಸ್ಥಾಪಕರು ಮತ್ತು ಕಾರ್ಯ ನಿರ್ವಾಹಕ ಅಧ್ಯಕ್ಷ ಡಾ.ಎಸ್.ಚಂದ್ರಶೇಖರ್ ಮಾತನಾಡಿ, ದಕ್ಷಿಣ ಭಾರತದಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುತ್ತಿರುವ ಕಾವೇರಿ ಆಸ್ಪತ್ರೆ ಸಮೂಹವು ಬೆಂಗಳೂರಿನ ಮಾರತಹಳ್ಳಿಯಲ್ಲಿ ಹೊಸದಾಗಿ ಆಸ್ಪತ್ರೆ ಆರಂಭಿಸಿದೆ, ಈ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಸೌಲಭ್ಯ ನೀಡಲು ಬದ್ಧವಾಗಿದೆ ಎಂದು ಹೇಳಿದರು.
ನೂತನ ಆಸ್ಪತ್ರೆಯಲ್ಲಿ 24/7 ತುರ್ತು ಸೇವೆ, ಅಪಘಾತ ಮತ್ತು ತೀವ್ರ ನಿಗಾ ಘಟಕದ ಸೌಲಭ್ಯ ಇವೆ, ಕೀಲು ಮತ್ತು ಸಂಧಿ, ಹೃದಯ ವಿಜ್ಞಾನ, ಜಠರ ವಿಜ್ಞಾನ, ತಾಯಿ ಮತ್ತು ಮಗುವಿನ ಆರೈಕೆ, ಮೂತ್ರಪಿಂಡ ವಿಜ್ಞಾನ, ನರ ವಿಜ್ಞಾನ ಸೇರಿದಂತೆ ಅನೇಕ ಆರೋಗ್ಯ ಸೇವೆ ತಜ್ಞ ವೈದ್ಯರು ಒದಗಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಶರತ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಕಾವೇರಿ ಆಸ್ಪತ್ರೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ.ಮಣಿವಣ್ಣನ್ ಸೇಲ್ವರಾಜ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಸ್. ವಿಜಯಭಾಸ್ಕರನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!