ಕಾರು ಅಪಘಾತದಲ್ಲಿ ಜೆಸಿಎಂ ಪಾರು

15

Get real time updates directly on you device, subscribe now.


ತುಮಕೂರು: ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಸೋಮವಾರ ಬೆಳಗ್ಗೆ ಕಾರು ಅಪಘಾತಕ್ಕೀಡಾಗಿ ಅದೃಷ್ಟವಶಾತ್ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಪಾರಾಗಿದ್ದಾರೆ.
ಬೆಂಗಳೂರು- ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಒನ್ ವೇನಲ್ಲಿ ಬರುತ್ತಿದ್ದ ಗೂಡ್ಸ್ ವಾಹನ ತಪ್ಪಿಸಲು ಹೋಗಿ ಕಾರು ಮತ್ತೊಂದು ಕಾರಿಗೆ ಹೊಡೆದು ಅದೃಷ್ಟವಶಾತ್, ಮಾಧುಸ್ವಾಮಿ ಹಾಗೂ ಅವರ ಕಾರು ಚಾಲಕ ಇಬ್ಬರು ಪಾರಾಗಿದ್ದಾರೆ.
ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಪ್ರಚಾರ ಮಾಡಲು ಬೀರೂರಿಗೆ ತೆರಳುತ್ತಿದ್ದರು, ಬೀರೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲು ಅವರು ಕಾರಿನಲ್ಲಿ ತೆರಳುತ್ತಿದ್ದರು, ಇದೇ ವೇಳೆ ಅವರ ಕಾರು ಲಘು ಅಪಘಾತಕ್ಕೀಡಾಗಿದೆ.

Get real time updates directly on you device, subscribe now.

Comments are closed.

error: Content is protected !!