ಶಿಕ್ಷಕ ಸದಾಶಿವಯ್ಯ ನಿಧನ

141

Get real time updates directly on you device, subscribe now.

ಕುಣಿಗಲ್: ಪಟ್ಟಣದ ಕೆ.ಆರ್.ಎಸ್ ಅಗ್ರಹಾರದಲ್ಲಿನ ಕರ್ನಾಟಕ ನವಚೇತನ ಅಂಧ ಮಕ್ಕಳಶಾಲೆಯ ಮುಖ್ಯಶಿಕ್ಷಕ ಸದಾಶಿವಯ್ಯ(50) ಅನಾರೋಗ್ಯದಿಂದ ಸೋಮವಾರ ಬೆಳಗ್ಗೆ ನಿಧನರಾದರು.
ಸದಾಶಿವಯ್ಯ ಕಳೆದ ಎರಡು ದಶಕಗಳಿಂದ ಅಂಧ ಮಕ್ಕಳ ಶಾಲೆಯ ಶಿಕ್ಷಕರಾಗಿ, ಮುಖ್ಯಶಿಕ್ಷಕರಾಗಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ತಮ್ಮದೆ ಅದ ಕೊಡುಗೆ ನೀಡಿದ್ದರು. ಶಾಲೆಯ ಮಕ್ಕಳು ವಿವಿಧ ಸಾಂಸ್ಕೃತಿಕ ಸಮಾರಂಭಗಳಲ್ಲಿ ಪಾಲ್ಗೊಂಡು ಉತ್ತಮ ಸಮೂಹ ಗಾಯನ ಕಾರ್ಯಕ್ರಮ ನೀಡಿ ಬಹುಮಾನ ಗಳಿಸಲು ಶ್ರಮಿಸಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದ ನಿಮಿತ್ತ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ವರ್ಗ, ಶಿಷ್ಯ ವರ್ಗವನ್ನು ಅಗಲಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಕೆ.ರಮೇಶ್, ಕಸಾಪ ಮಾಜಿ ಅಧ್ಯಕ್ಷ ದಿನೇಶ್ಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್.ಹರೀಶ್, ಹಿರಿಯ ಸದಸ್ಯ ರಂಗಸ್ವಾಮಿ ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!