ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ- ಓರ್ವ ಸಾವು

20

Get real time updates directly on you device, subscribe now.


ಗುಬ್ಬಿ: ತಾಲ್ಲೂಕಿನ ಹೊಸ ಪಾಳ್ಯಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮಂಗಳವಾರ ಕಾರು ಹಾಗೂ ಟಿವಿಎಸ್ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ತುಮಕೂರು ತಾಲ್ಲೂಕು ವಕ್ಕೋಡಿ ಗ್ರಾಮದ ಜಯಣ್ಣ (53) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಹೊಸಪಾಳ್ಯ ಗ್ರಾಮದ ಮಾರುತಿ ನಾಯಕ (23) ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿವಿಎಸ್ ಸವಾರರಿಬ್ಬರೂ ಹೊಸಪಾಳ್ಯದಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ ಗುಬ್ಬಿ ಕಡೆಯಿಂದ ಅತೀ ವೇಗವಾಗಿ ಬಂದ ಟಾಟಾ ಇಂಡಿಕಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ರಸ್ತೆ ವಿಭಜಕ ದಾಟಿ ರಸ್ತೆಯ ಬಲ ಬದಿಗೆ ಹೋಗಿ ನಿಂತಿದೆ.
ಕಾರಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಕಾರಿನ ಚಾಲಕ ತಲೆ ಮರೆಸಿಕೊಂಡಿದ್ದಾನೆ.
ಸ್ಥಳಕ್ಕೆ ಗುಬ್ಬಿ ಪೊಲೀಸರು ತೆರಳಿ ಅಗತ್ಯ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ತಲೆ ಮರೆಸಿಕೊಂಡಿರುವ ಕಾರಿನ ಚಾಲಕನ ಪತ್ತೆಗೆ ಕ್ರಮ ವಹಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!