ಲಿಂಕ್ ಕೆನಾಲ್ ಜಿಲ್ಲೆಯ ನೀರಿಗೆ ಕನ್ನ ಹಾಕುತ್ತೆ

ಲಿಂಕ್ ಕೆನಾಲ್ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ: ನಿಂಗಪ್ಪ

21

Get real time updates directly on you device, subscribe now.


ತುಮಕೂರು: ಹೇಮಾವತಿ ನಾಲೆ ಡೈವರ್ಟ್ ಮಾಡಿ ರಾಮನಗರ ಜಿಲ್ಲೆಯ ಮಾಗಡಿ ಮತ್ತಿತರರ ಕಡೆಗಳಿಗೆ ನೀರು ತೆಗೆದುಕೊಂಡು ಹೋಗುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ನಿಂದ ಇಡೀ ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ತೊಂದರೆಯಾಗುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು, ಜನರು ಪಕ್ಷಾತೀತವಾಗಿ ಮೇ 16 ರಂದು ನಡೆಯುವ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಶಾಸಕ ಹೆಚ್.ನಿಂಗಪ್ಪ ಮನವಿ ಮಾಡಿದ್ದಾರೆ.
ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 10 ಅಡಿ ವ್ಯಾಸದ ಕೊಳವೆ ಮೂಲಕ ಗ್ರಾವಿಟಿಯಲ್ಲಿ ನೀರು ತೆಗೆದುಕೊಂಡು ಹೋಗಲು ಕಾಮಗಾರಿ ನಡೆಯುತ್ತಿದ್ದು, ಯೋಜನೆ ಜಾರಿಗೆ ಬಂದರೆ ನಾಲಾ ವಲಯದ ಇತರೆ ತಾಲೂಕುಗಳಿಗೆ ಕುಡಿಯುವ ನೀರು ಇಲ್ಲದಂತಾಗುತ್ತದೆ, ಹಾಗಾಗಿ ನಮ್ಮ ನೀರು, ನಮ್ಮ ಹಕ್ಕು ಎಂಬ ಭಾವನೆಯಿಂದ ಜಿಲ್ಲೆಯ ಜನರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ,ಗೂಳೂರು ನವೀನ್ ಗೌಡ, ನಾಗವಲ್ಲಿ ರಾಮಣ್ಣ, ಹೆಬ್ಬೂರು ಗೋವಿಂದರಾಜು, ಊರ್ಡಿಗೆರೆ ಲಕ್ಷ್ಮಿನಾರಾಯಣ, ಲೋಕೇಶ್, ಗೋವಿಂದಪ್ಪ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!