ಅಪಘಾತದಲ್ಲಿ ಎಎಸೈ ನಿಧನ

28

Get real time updates directly on you device, subscribe now.


ಕುಣಿಗಲ್: ಕರ್ತವ್ಯನಿರತ ಎಎಸೈಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಗಾಯಗೊಂಡಿದ್ದ ಎಎಸೈ ಚಿಕಿತ್ಸೆ ಪಡೆಯುವಾಗ ಮೃತಪಟ್ಟಿದ್ದಾರೆ.
ಮೃತ ಎಎಸೈ ವೆಂಕಟೇಶ್ (52) ಎಂದು ಗುರುತಿಸಲಾಗಿದೆ, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಎಸ್ ಐ ಬುಧವಾರ ರಾತ್ರಿ ಕಾರ್ಯ ನಿಮಿತ್ತ ಬೈಕ್ ನಲ್ಲಿ ಬರುವಾಗ ರಾಷ್ಟ್ರೀಯ ಹೆದ್ದಾರಿ 75ರ ಆಲಪ್ಪನ ಗುಡ್ಡೆ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡ ವೆಂಕಟೇಶ ಅವರನ್ನು ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗಿದೆ ಗುರುವಾರ ಬೆಳಗಿನ ಜಾವ ನಿಧನ ಹೊಂದಿದ್ದಾರೆ.
ಮೃತರಿಗೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ನಾಗರಿಕರು ಸಂತಾಪ ಸೂಚಿಸಿದರು, ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದು, ಅಂತ್ಯಕ್ರಿಯೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಹೆಮ್ಮೇರಹಳ್ಳಿ ತಾಂಡ್ಯದಲ್ಲಿ ನೆರವೇರಿಸಲಾಯಿತು.

Get real time updates directly on you device, subscribe now.

Comments are closed.

error: Content is protected !!