ಎಡಿಸಿಯಿಂದ ವಿವಿಧ ಕಾಮಗಾರಿ ಪ್ರಗತಿ ಪರಿಶೀಲನೆ

31

Get real time updates directly on you device, subscribe now.


ತುಮಕೂರು: ನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅವರು ಶನಿವಾರ ಎಸ್ ಮಾಲ್ ಬಳಿ ನಿರ್ಮಿಸುತ್ತಿರುವ ಸೇತುವೆ ಹಾಗೂ ವರ್ತುಲ ರಸ್ತೆ ನಿರ್ಮಾಣ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಮಳೆ ನಿಂತ ಕೂಡಲೇ ಎಸ್ ಮಾಲ್ ಬಳಿ ತುಮಕೂರು ನಗರದಿಂದ ಶಿರಾಗೇಟ್ ಕಡೆಗೆ ಲಘು ವಾಹನಗಳು ಸಂಚರಿಸಲು ಅನುವಾಗುವಂತೆ ಪರ್ಯಾಯವಾಗಿ ಏಕಮುಖ ರಸ್ತೆ (ತಾತ್ಕಾಲಿಕ) ನಿರ್ಮಾಣ ಮಾಡಬೇಕೆಂದು ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಎನ್.ಕೆ.ರವಿ ಅವರಿಗೆ ಸೂಚನೆ ನೀಡಿದರು.
ವರ್ತುಲ ರಸ್ತೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ನಿಂತಿರುವುದರಿಂದ ವಾಹನಗಳು ಸಂಚರಿಸಲು ಸಾಧ್ಯವಿಲ್ಲದಂತಾಗಿದೆ, ಇಲ್ಲಿಯೂ ಮಳೆ ಬಿಡುವು ಕೊಟ್ಟ ಕೂಡಲೇ ಮಳೆನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡುವುದರೊಂದಿಗೆ ವರ್ತುಲ ರಸ್ತೆ ಕಾಮಗಾರಿ ಹಾಗೂ ವರ್ತುಲ ರಸ್ತೆಯಲ್ಲಿ ಪ್ರಗತಿಯಲ್ಲಿರುವ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಬೇಕೆಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಸಹಾಯಕ ಇಂಜಿನಿಯರ್ ಸಿದ್ದಪ್ಪ ಅವರು ಕಾಮಗಾರಿ ಪ್ರಗತಿ ವಿವರದ ಬಗ್ಗೆ ಅಪರ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು, ತಹಶೀಲ್ದಾರ್ ಸಿದ್ದೇಶ್ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!