ಅರ್ಜುನ್ ಜನ್ಯ ಆರೋಗ್ಯದಲ್ಲಿ ಚೇತರಿಕೆ

ಸದ್ಯಕ್ಕೆ ಹತ್ತು ದಿನ ಮನೆಯಲ್ಲೆ ರೆಸ್ಟ್!

292

Get real time updates directly on you device, subscribe now.

ಬೆಂಗಳೂರು: ಕೋವಿಡ್ ನಿಂದ ಅಪೋಲೊ ಆಸ್ಪತ್ರೆ ಸೇರಿದ್ದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ಇಲ್ಲಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.
ಈ ಮುಂಚೆ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದರು. ಒತ್ತಡದಿಂದ ಕೆಲಸ ನಿರ್ವಹಿಸದೆ ಆರೋಗ್ಯದ ಕಡೆ ಗಮನ ಹರಿಸುವಂತೆ ವೈದ್ಯರು ಸಲಹೆ ನೀಡಿದ್ದರು.
ಆದರೆ, ಏ.10 ರಂದು ಕೋವಿಡ್‍ ಪಾಸಿಟೀವ್ ದೃಢಪಟ್ಟ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗ ಬೇಕಾಯಿತು.
ಈಗ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ, ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿ ರೆಸ್ಟ್ ಮಾಡಿ ಎಂದು ವೈದ್ಯರು ಸೂಚಿಸಿ ಆಸ್ಪತ್ರೆಯಿಂದ ಡಿಸ್ಟ್ ಚಾರ್ಜ್ ಮಾಡಿದ್ದಾರೆ.
ಸಂಗೀತ ಲೋಕದ ಮಹಾನ್‍ ಮಾಂತ್ರಿಕ ಅರ್ಜುನ್ ಜನ್ಯ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂಬುದು ಅವರ ಅಭಿಮಾನಿಗಳ ಆಶಯವಾಗಿದೆ.

Get real time updates directly on you device, subscribe now.

Comments are closed.

error: Content is protected !!