ವಾಹನ ಡಿಕ್ಕಿ- ಪಾದಚಾರಿ ಸಾವು

19

Get real time updates directly on you device, subscribe now.


ಕುಣಿಗಲ್: ಅಪರಿಚಿತ ವಾಹನ ಪಾದಾಚಾರರಿಗೆ ಡಿಕ್ಕಿ ಹೊಡೆದು ಪರಾರಿಯಾಗುವ ಭರದಲ್ಲಿ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮೃತಪಟ್ಟಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದಲ್ಲಿ ಸಂಭವಿಸಿದೆ.
ಗುರುವಾರ ರಾತ್ರಿ ಪಟ್ಟಣದ ಬಿದನಗೆರೆ ಸಮೀಪ ಅಪರಿಚಿತ ಗ್ಸ್ ವಾಹನ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲಿ ಮೃತಪಟ್ಟಿದ್ದಾನೆ, ಆತನ ವಿವರ ತಿಳಿದು ಬಂದಿಲ್ಲ, ಮಲ್ಲಾಗಟ್ಟ ಸಮೀಪ ಬೈಕ್ ಸವಾರರಿಗೆ ಡಿಕ್ಕಿ ಹೊಡೆದು ಪರಿಣಾಮ ಅಮ್ಜದ್ ಖಾನ್ ತೀವ್ರ ಗಾಯಗೊಂಡಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ, ಘಟನೆ ಸಂಭಂದ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!