ಅಪಘಾತದಲ್ಲಿ ಬೈಕ್ ಸವಾರ ಸಾವು

22

Get real time updates directly on you device, subscribe now.


ಕುಣಿಗಲ್: ಬೈಕ್ ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಸವಾರರಿಗೆ ವಾಹನವೊಂದು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಂಜಿಚನ್ನಯ್ಯನ ಪಾಳ್ಯದ ಬಳಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗೆ ಅದಿಚುಂಚನಗಿರಿ ಅಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ತಿಪಟೂರು ಮೂಲದ ಹರ್ಷವರ್ಧನ ಗೌಡ (30) ಮೃತಪಟ್ಟಿದ್ದಾರೆ, ಮತ್ತೋರ್ವ ಚರಣ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!