ದೂರದೃಷ್ಟಿಗೆ ತಕ್ಕಂತೆ ಶಕ್ತಿ ಮೀರಿ ಕೆಲಸ ಮಾಡುವೆ

ನೂತನ ಕೇಂದ್ರ ಸಚಿವ ವಿ.ಸೋಮಣ್ಣ ಸಿದ್ದಗಂಗಾ ಮಠಕ್ಕೆ ಭೇಟಿ

28

Get real time updates directly on you device, subscribe now.


ತುಮಕೂರು: ನಗರದ ಸಿದ್ದಗಂಗಾ ಮಠಕ್ಕೆ ಕೇಂದ್ರದ ನೂತನ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ ಹಿರಿಯ ಶ್ರೀ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ದರ್ಶನ ಪಡೆದು, ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಎನ್ ಡಿ ಎ ಒಕ್ಕೂಟದಿಂದ ನನ್ನನ್ನು ರಾಷ್ಟ್ರದ ಮಂತ್ರಿಯಾಗಿ ನೇಮಕ ಮಾಡುವ ಮೂಲಕ ಎರಡು ಉಪಯುಕ್ತ ಇಲಾಖೆಗಳ ಜವಾಬ್ದಾರಿ ನೀಡಿದ್ದಾರೆ, ದೇಶದ ಜನತೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ತಕ್ಕಂತೆ ಕೆಲಸ ಮಾಡಲು ನನ್ನ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದರು.

ಪ್ರಚಲಿತ ರಾಷ್ಟ್ರದಲ್ಲಿರುವ ಎರಡು ಇಲಾಖೆಗಳಿಂದ ಜನಸಾಮಾನ್ಯರಿಗೆ ಸಿಗಬೇಕಾಗಿರುವ ಅವಶ್ಯತೆಗಳ ಪೂರೈಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು, ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಸುರೇಶ್ ಗೌಡ, ಜ್ಯೋತಿಗಣೇಶ್, ಚಿದಾನಂದ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ, ಎಂ.ವಿ. ವೀರಭದ್ರಯ್ಯ, ದಿಲೀಪ್ ಕುಮಾರ್, ಅನಿಲ್ ಕುಮಾರ್, ವೈ.ಹೆಚ್. ಹುಚ್ಚಯ್ಯ, ಕೊಂಡವಾಡಿ ಚಂದ್ರಶೇಖರ್, ಸಿ.ಎಂ.ರಾಜಪ್ಪ, ವಿಶ್ವನಾಥಗೌಡ, ಸ್ಫೂರ್ತಿ ಚಿದಾನಂದ್ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!