ರೈತರಿಬ್ಬರ ಮೇಲೆ ಕರಡಿ ದಾಳಿ

25

Get real time updates directly on you device, subscribe now.


ಪಾವಗಡ: ಕೃಷಿ ಕೆಲಸ ಮಾಡಲು ಜಮೀನಿಗೆ ತೆರಳಿದ್ದ ಇಬ್ಬರು ರೈತರ ಮೇಲೆ ಕರಡಿ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ರೈತರನ್ನುಗ್ರಾಮಸ್ಥರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಮಂಗಳವಾರ ಸಂಜೆ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಕೆಟಿ ಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತರಾದ ಹುತ್ತಣ್ಣ ಹಾಗೂ ದಾಸಣ್ಣ ತಮ್ಮ ಜಮೀನುಗಳಲ್ಲಿ ಜಾನುವಾರು ಮೇಯಿಸಿಕೊಂಡು ಕೃಷಿ ಕೆಲಸ ಮಾಡುತ್ತಿದ್ದರು, ಮಂಗಳವಾರ ಸಂಜೆ 4 ಗಂಟೆ ಸಮಯದಲ್ಲಿ ಕರಡಿ ದಾಳಿ ನಡೆಸಿದ್ದು ರೈತರಿಗೆ ಕಾಲು, ಮುಖ, ತೊಡೆ ಹಾಗೂ ಬೆನ್ನಿನ ಭಾಗಗಳಿಗೆ ಗಂಭೀರ ಗಾಯಗಳಾಗಿವೆ.
ಗ್ರಾಮದಲ್ಲಿ ಪದೇ ಪದೇ ಕರಡಿ ದಾಳಿ ಆಗುತ್ತಿರುವ ಮಾಹಿತಿ ಅರಣ್ಯ ಇಲಾಖೆಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಆದ್ದರಿಂದ ಕರಡಿಗಳು ರೈತರ ಜಮೀನಿಗಷ್ಟೇ ಅಲ್ಲದೆ ಗ್ರಾಮದಲ್ಲೂ ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.

Get real time updates directly on you device, subscribe now.

Comments are closed.

error: Content is protected !!