ಅಪಘಾತದಲ್ಲಿ ವ್ಯಕ್ತಿ ಸಾವು

26

Get real time updates directly on you device, subscribe now.


ಕುಣಿಗಲ್: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತಪಟ್ಟವರನ್ನು ನಾಗರಾಜ್ (55) ಎಂದು ಗುರುತಿಸಲಾಗಿದೆ, ಈತ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ 75ರ ಬದಿಯಲ್ಲಿರುವ ಪ್ರಿಯದರ್ಶಿನಿ ಹೋಟಲ್ ನ ವ್ಯವಸ್ಥಾಪಕರಾಗಿದ್ದು, ಜೂ.8ರ ರಾತ್ರಿ ಹೋಟೆಲ್ ಬಾಗಿಲು ಮುಚ್ಚಿ ಹೆದ್ದಾರಿಯಲ್ಲಿ ಬರುವಾಗ ಬೈಕ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದು ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!