ಅದ್ದೂರಿ ಸ್ವಾತಂತ್ರ್ಯೋತ್ಸವ ಆಚರಣೆಗೆ ನಿರ್ಧಾರ

22

Get real time updates directly on you device, subscribe now.


ಕುಣಿಗಲ್: ಮಕ್ಕಳು ಹಾಗೂ ಸಾರ್ವಜನಿಕರ ಹೆಚ್ಚಿನ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯೋತ್ಸವವನ್ನು ಪರಿಣಾಮಕಾರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಡಾ.ರಂಗನಾಥ್ ಅಧಿಕಾರಿಗಳಿಗೆ ಹೇಳಿದರು.
ತಾಪಂ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಭೆಯಲ್ಲಿದ್ದ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸಾರ್ವಜನಿಕರ ಅಭಿಪ್ರಾಯ ಪಡೆದು ಮಾತನಾಡಿ, ದೇಶದ ನಾಳಿನ ಭವಿಷ್ಯವಾದ ಮಕ್ಕಳೆ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಭಾಷಣ ಮಾಡುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳುವಂತೆ, ವಿವಿಧ ಶಾಲೆಗಳ ಬ್ಯಾಂಡ್ ಸೆಟ್ ತಂಡಗಳು ಭಾಗವಹಿಸುತ್ತಿದ್ದು ಉತ್ತಮ ಪ್ರದರ್ಶನ ನೀಡಿದ ತಂಡಕ್ಕೆ ಬಹುಮಾನ ನೀಡುವುದು, ರಾಜ್ಯ, ರಾಷ್ಟ್ರಮಟ್ಟದ ಉನ್ನತ ತಾಂತ್ರಿಕ, ಶಿಕ್ಷಣ ಪ್ರವೇಶ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದು, ಕೃಷಿ ಸೇರಿದಂತೆ ವಿವಿಧ ರಂಗಗಳಲ್ಲಿ ಉತ್ತಮ ಸಾಧನೆ ಮಾಡಿದ ರೈತರು, ಪ್ರಗತಿಪರ ಉದ್ಯಮಿಗಳನ್ನು ಗೌರವಿಸಲು ಕ್ರಮ ವಹಿಸುವುದು ಸೇರಿದಂತೆ ಈ ಬಾರಿ ಸರ್ಕಾರಿ ಅಧಿಕಾರಿಗಳಿಗೆ ಸನ್ಮಾನಕ್ಕೆ ಕೆಲವರು ಆಕ್ಷೇಪಿಸಿದ್ದರಿಂದ ಆ ಬಗ್ಗೆ ಸನ್ಮಾನ ಸಮಿತಿ ಕ್ರಮ ವಹಿಸಲು ಸೂಚಿಸಲಾಯಿತು.
ತಹಶೀಲ್ದಾರ್ ರಶ್ಮಿ, ತಾಪಂ ಇಒ ನಾರಾಯಣ, ಸಿಪಿಐ ನವೀನ್ ಗೌಡ, ಪುರಸಭೆ ಮುಖ್ಯಾಧಿಕಾರಿ ಶಿವಪ್ರಸಾದ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!