ವಿವಿಧ ಬೇಡಿಕೆ ಈಡೇರಿಕೆಗೆ ರೈತರ ಪ್ರತಿಭಟನೆ

20

Get real time updates directly on you device, subscribe now.


ಗುಬ್ಬಿ: ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ತಾಲೂಕು ಕಚೇರಿಯ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ಪಟ್ಟಣದ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ನೂರಾರು ರೈತರು ಮತ್ತು ರೈತ ಮಹಿಳೆಯರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಾ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಚೆನ್ನಬಸವಯ್ಯ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಯಾವುದೇ ಸರಕಾರಗಳು ರೈತರ ಪರವಾಗಿ ಕೆಲಸ ಮಾಡಿಲ್ಲ, ತಮ್ಮ ಅಧಿಕಾರದ ಆಸೆಗಾಗಿ ರೈತರನ್ನು ಮತದ ಬ್ಯಾಂಕ್ ಮಾಡಿಕೊಂಡಿದ್ದಾರೆ, ಕಳೆದ 40 ವರ್ಷಗಳಿಂದ ನಿತ್ಯ ನಿರಂತರವಾಗಿ ರಾಜ್ಯದಲ್ಲಿ ಸಾವಿರಾರು ರೈತರು ಉಳುಮೆ ಮಾಡುತ್ತಿದ್ದರೂ ರೈತರಿಗೆ ಮಂಜೂರು ಚೀಟಿ ನೀಡಿಲ್ಲ ಮತ್ತು ಜಮೀನು ದುರಸ್ತಿ ಮಾಡಿಲ್ಲ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಒಂದುವರೆ ವರ್ಷ ಕಳೆದರೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ದೊಡ್ಡ ನಂಜಪ್ಪ, ಕೃಷ್ಣಮೂರ್ತಿ, ನಾಗರಾಜು, ರಾಜಮ್ಮ, ನರಸಿಂಹಮೂರ್ತಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!