ದರಿದ್ರ ಸರಕಾರ ಅನುದಾನ ಬಿಡುಗಡೆ ಮಾಡ್ತಿಲ್ಲ: ಎಂಟಿಕೆ

9

Get real time updates directly on you device, subscribe now.


ಗುಬ್ಬಿ: ದರಿದ್ರ ಕಾಂಗ್ರೆಸ್ ಸರಕಾರ ಯಾವುದೇ ಅನುದಾನ ಬಿಡುಗಡೆ ಮಾಡುತ್ತಿಲ್ಲ, ಹೀಗಾಗಿ ಕ್ಷೇತ್ರಗಳನ್ನು ಯಾವ ರೀತಿ ಅಭಿವೃದ್ಧಿ ಮಾಡುವುದು ಹೇಳಿ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ಕೇಳಿದರು.

ತಾಲೂಕಿನ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಮಣಿಕುಪ್ಪೆ ಗ್ರಾಮದಲ್ಲಿ ಸುಮಾರು 8 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಜಲಜೀವನ್ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ತುರುವೇಕೆರೆ ಮುಡ ಹಗರಣದ ಬಗ್ಗೆ ನಾನೇನು ಮಾತನಾಡುವುದಿಲ್ಲ, ಯಾಕೆಂದರೆ ಅದು ನ್ಯಾಯಾಲಯದಲ್ಲಿ ಇರುವುದರಿಂದ ತೀರ್ಪು ಬಂದ ನಂತರ ಅದರ ಬಗ್ಗೆ ಸಂಕ್ಷಿಪ್ತವಾಗಿ ತಿಳಿಯುತ್ತದೆ, ಅಲ್ಲಿಯವರೆಗೂ ನಾನು ಮಾತನಾಡುವುದಿಲ್ಲ, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ಶಾಸಕರಾಗಿದ್ದರು, ಹಾಗಾಗಿ ಅದು ಜೆಡಿಎಸ್ ಕ್ಷೇತ್ರವಾಗಿದ್ದು, ಜೆಡಿಎಸ್ ಪಕ್ಷದಿಂದಲೇ ಯಾರನ್ನಾದರೂ ಚುನಾವಣೆಗೆ ಸಿದ್ಧತೆ ಮಾಡುತ್ತಾರೆ, ಎರಡು ಪಕ್ಷಗಳು ಸೇರಿಯೇ ಒಂದಾಗಿ ಚುನಾವಣೆ ಎದುರಿಸುತ್ತೇವೆ, ಅದು ಇನ್ನು ಮುಂದಿನ ದಿನಗಳಲ್ಲಿ ಚರ್ಚೆಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಕುಮಾರ್,ಈಶ್ವರಗೌಡ, ತಿಮ್ಮೆಗೌಡ, ನರಸಿಂಹಮೂರ್ತಿ, ನರಸೇಗೌಡ
ಚಂದ್ರಣ್ಣ, ಜಗದೀಶ್, ರಾಮಲಿಂಗೇಗೌಡ, ಬೀರಮಾರನಹಳ್ಳಿ ನರಸೇಗೌಡ ಇನ್ನಿತರರು ಭಾಗಿಯಾಗಿದ್ದರು.

Get real time updates directly on you device, subscribe now.

Comments are closed.

error: Content is protected !!