ಹಾವು ಕಚ್ಚಿ ಬಾಲಕಿ ಸಾವುಹಾವು ಕಚ್ಚಿ ಬಾಲಕಿ ಸಾವು

9

Get real time updates directly on you device, subscribe now.


ಕುಣಿಗಲ್: ಗೌರಿ ಹಬ್ಬದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿತದಿಂದ ಮೃತಪಟ್ಟ ಧಾರುಣ ಘಟನೆ ಪಟ್ಟಣದ 22ನೇ ವಾರ್ಡ್ನಲ್ಲಿ ಶುಕ್ರವಾರ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಸ್ಪಂದನ (13) ಎಂದು ಗುರುತಿಸಲಾಗಿದ್ದು, ಈಕೆ 22ನೇ ವಾರ್ಡ್ ನ ಮಲ್ಲಿಪಾಳ್ಯದಲ್ಲಿ ವಾಸವಾಗಿರುವ ಪುರಸಭೆ ವಾಟರ್ ಮನ್ ಕುಮಾರ್ ಎಂಬುವವರ ಮಗಳು, ಶುಕ್ರವಾರ ಮನೆಯವರೊಂದಿಗೆ ಗೌರಿ ಹಬ್ಬದ ನಿಮಿತ್ತ ಪಟ್ಟಣದ ವೈಕೆಆರ್ ಪಾರ್ಕ್ ಬಳಿ ಇರುವ ಮುಳ್ಳುಕಟ್ಟಮ್ಮ ದೇವಾಲಯಕ್ಕೆ ಪೂಜೆಗೆ ತೆರಳಿದ್ದಳು, ಬಾಲಕಿ ದೇವಾಲಯ ಸಮೀಪದಲ್ಲಿದ್ದ ಬೆಂಚ್ ಮೇಲೆ ಕುಳಿತಿದ್ದು, ಈ ವೇಳೆ ಹಾವು ಕಡಿತಕ್ಕೆ ಒಳಗಾಗಿದ್ದಾಳೆ, ಪೂಜೆ ಮುಗಿಸಿಕೊಂಡು ಕುಟುಂಬದವರೊಂದಿಗೆ ಮನೆಗೆ ಬಂದ ಬಾಲಕಿ, ಕೆಲಕಾಲ ಆಟ ಆಡಿದ್ದು ನಂತರ ತೀವ್ರ ಅಸ್ವಸ್ಥಗೊಂಡು ಕೆಳಗೆ ಬಿದ್ದಳು, ಮನೆಯವರು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರಿಸ್ಥಿತಿ ಕೈಮೀರಿ ಹೆಚ್ಚಿನ ಚಿಕಿತ್ಸೆಗೆ ಬೆಳ್ಳೂರ್ ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ, ಬಾಲಕಿಯು ಕೆಆರ್ಎಸ್ ಅಗ್ರಹಾರದ ಖಾಸಗಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

Get real time updates directly on you device, subscribe now.

Comments are closed.

error: Content is protected !!