ಗುಬ್ಬಿ: ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೀವಂತ ಜಿಲೆಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಅರಿಯದೆ ಜಿಲೆಟಿನ್ ಕಡ್ಡಿ ಮುಟ್ಟಿದ್ದು ಅದು ಸ್ಫೋಟ ಉಂಟಾಗಿ ವಿದ್ಯಾರ್ಥಿ ಕೈ ಬೆರಳುಗಳು ತುಂಡಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ದಸರಾ ರಜೆ ಹಿನ್ನಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳು ವಿಶೇಷ ತರಗತಿಗೆ ಆಗಮಿಸುತ್ತಿದ್ದ ಸಮಯದಲ್ಲಿ ಇಡಗೂರು ಗ್ರಾಮದ ವಿದ್ಯಾರ್ಥಿ ಮೋನಿಶ್ ಗೌಡ (15) ಕಲ್ಲು ಬಂಡೆ ಚೂರುಗಳ ಮಧ್ಯೆ ಕಂಡ ವೈರ್ ಸಹಿತ ಇದ್ದ ಜಿಲೆಟಿನ್ ಕಡ್ಡಿ ಕಂಡು ಕುತೂಹಲದಿಂದ ತೆಗೆದುಕೊಂಡು ಶಾಲಾ ಆವರಣದಲ್ಲಿ ತೆರಳಿದ ನಂತರ ಬಿಸಿಯಾದ ಅನುಭವಕ್ಕೆ ಭಯಗೊಂಡು ಜಿಲೆಟಿನ್ ಕಡ್ಡಿ ಎಸೆಯಲು ಮುಂದಾದಾಗ ಸ್ಫೋಟಗೊಂಡು ಬಲಗೈ ಬೆರಳುಗಳು ತುಂಡಾಗಿವೆ, ಸುಮಾರು ಒಂದು ಕಿ.ಮೀ ಸುತ್ತಳತೆಯಲ್ಲಿ ಇಡೀ ಗ್ರಾಮಕ್ಕೆ ಸ್ಫೋಟದ ಶಬ್ದ ಕೇಳಿಸಿದೆ.
ಸ್ಥಳಕ್ಕೆ ಭೂ ಮತ್ತು ಗಣಿಗಾರಿಕೆ ಉಪ ನಿರ್ದೇಶಕ ಲೋಕೇಶ್ ಕುಮಾರ್ ಹಾಗೂ ಭೂ ವಿಜ್ಞಾನಿ ಸಂತೋಷ್ ಕುಮಾರ್ ಭೇಟಿ ನೀಡಿ ಜಿಲಟಿನ್ ಕಡ್ಡಿ ಬಗ್ಗೆ ಪರಿಶೀಲನೆ ನಡೆಸಿದರು, ತಾಪಂ ಇಓ ಶಿವಪ್ರಕಾಶ್, ಕಂದಾಯ ನಿರೀಕ್ಷಕಿ ಪ್ರಮೀಳಾ, ಗ್ರಾಮ ಲೆಕ್ಕಿಗ ಅಭಿಷೇಕ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
Comments are closed.