ಶಿರಾ- ಭೈರೇನಹಳ್ಳಿ ರಸ್ತೆ ಅಭಿವೃದ್ಧಿಗೆ ಸಾವಿರ ಕೋಟಿ: ಸೋಮಣ್ಣ

4

Get real time updates directly on you device, subscribe now.


ತುಮಕೂರು: ಶಿರಾ, ಮಧುಗಿರಿ, ಭೈರೇನಹಳ್ಳಿ ವಿಭಾಗದ 52 ಕಿ.ಮೀ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಜಾರಿ ಮಾಡಿ 1000 ಕೋಟಿ ರೂ. ಮೀಸಲಿಟ್ಟ ಬಗ್ಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಭಿನಂದಿಸಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಸಚಿವ ವಿ.ಸೋಮಣ್ಣ ಅವರು ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 206ರ ತುಮಕೂರು ನಗರ12.30 ಕಿ.ಮೀ, ಗುಬ್ಬಿ ಪಟ್ಟಣ 8.5 ಕಿ.ಮೀ ಇಲ್ಲಿ ಸಾರಿಗೆ ದಟ್ಟಣೆ ತಗ್ಗಿಸುವ ಪ್ರಸ್ತಾವನೆಯನ್ನು ಸಚಿವ ನಿತಿನ್ ಗಡ್ಕರಿಯವರ ಮುಂದಿಟ್ಟು ಇದಕ್ಕೂ ಅನುಮೋದನೆ ನೀಡುವಂತೆ ಸಚಿವ ಸೋಮಣ್ಣ ಮನವಿ ಮಾಡಿದರು, ಮನವಿಗೆ ಸ್ಪಂದಿಸಿದ ಭೂಸಾರಿಗೆ ಸಚಿವರು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Get real time updates directly on you device, subscribe now.

Comments are closed.

error: Content is protected !!