ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು

302

Get real time updates directly on you device, subscribe now.

ಕೊಡಿಗೇನಹಳ್ಳಿ: ತೀವ್ರ ಜ್ವರದಿಂದ ಬಳಲುತಿದ್ದು ವ್ಯಕ್ತಿಯೊಬ್ಬ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮಧುಗಿರಿ ತಾಲೂಕಿನ ತೆರಿಯೂರು ನಿವಾಸಿ ನರಸಿಂಹಮೂರ್ತಿ ಮೃತ ದುರ್ದೈವಿಯಾಗಿದ್ದು, ಕಳೆದ ಏಪ್ರಿಲ್ 21 ರಂದು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು.
ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿಲ್ಲ, ಬೆಡ್ ನೀಡಿಲ್ಲ, ಇಂಜೆಕ್ಷನ್ ಹಾಕಿಲ್ಲ, ಗ್ಲೂಕೋಸ್ ಹಾಕಿಲ್ಲ ಎಂದು ತನ್ನ ಸ್ನೇಹಿತರಿಗೆ ವೀಡಿಯೋ ಮೂಲಕ ತಮ್ಮ ನೋವನ್ನು ಹಂಚಿಕೊಂಡಿದ್ದರು.
ಶುಕ್ರವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ನರಸಿಂಹಮೂರ್ತಿ ಮೃತಪಟ್ಟಿದ್ದು ಮಧುಗಿರಿ ಸಾರ್ವಜನಿಕ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಎಂಬ ಆರೋಪ ಮಾಡಿದ್ದಾರೆ.
ಇಲ್ಲಿನ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ, ಬರುವ ಸೋಕಿಂತರಿಗೆ ಬೆಡ್ ವ್ಯವಸ್ಥೆ ಇಲ್ಲದೆ ತುಮಕೂರು ಅಥವಾ ಬೆಂಗಳೂರಿಗೆ ಕರೆದುಕೊಂಡು ಹೋಗಿ ಎಂದು ಹೇಳುತ್ತಿರುವ ಆರೋಪ ಕೇಳಿಬರುತ್ತಿದೆ.
ಗ್ರಾಪಂ ಅಧಿಕಾರಿ ನವೀನ್ ಹಾಗೂ ವೈಧ್ಯಾಧಿಕಾರಿ ಡಾ.ರಕ್ಷಿತ ಸಮ್ಮುಖದಲ್ಲಿ ಕೋವಿಡ್ ಮಾರ್ಗಸೂಚಿಯಂತೆ ಪಿಪಿಇ ಕಿಟ್ ಧರಿಸಿ ಮೃತನ ಅಂತ್ಯಸಂಸ್ಕಾರ ಗೌರವಯುತವಾಗಿ ನೆರೆವೇರಿಸಲಾಯಿತು, ನಂತರ ಪ್ರಮುಖ ಬೀದಿಗಳನ್ನು ಸ್ಯಾನಿಟೈಸ್ ಮಾಡಲಾಯಿತು.

Get real time updates directly on you device, subscribe now.

Comments are closed.

error: Content is protected !!