ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

454

Get real time updates directly on you device, subscribe now.

ಕೊರಟಗೆರೆ: ಮರಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಕೊರಟಗೆರೆ ತಾಲೂಕು ಎಲೆರಾಂಪುರ ಕೆರೆಯಲ್ಲಿ ಈ ದುರ್ಘಟನೆ ಜರುಗಿದ್ದು, ಇರಕಸಂದ್ರ ಕಾಲೋನಿ ಬಳಿಯ ಸಂಕೇನಹಳ್ಳಿ ಗ್ರಾಮದ ಲೇಟ್ ಗಂಗಹನುಜಪ್ಪನ ಮಗ ಕೆಂಪರಾಜು (28) ಸಾವಿಗೀಡಾದ ದುರ್ದೈವಿಯಾಗಿದ್ದಾನೆ.
ಮೃತ ಕೆಂಪರಾಜು ಮೂಲತಃ ದಾಬಸ್ಪೇಟೆಯ ತ್ಯಾಮಗೊಂಡ್ಲು ಬಳಿಯ ಓಬಳಾಪುರ ಗ್ರಾಮದವನ್ನಾಗಿದ್ದು, ಇತ್ತೀಚೆಗೆ ಕೆಲವು ವರ್ಷಗಳಿಂದ ಸಂಕೇನಹಳ್ಳಿ ಗ್ರಾಮದಲ್ಲಿ ವಾಸವಿದ್ದರು ಎನ್ನಲಾಗಿದೆ, ಮೃತ ಕೆಂಪರಾಜು ಸ್ವಲ್ಪ ಮುಂಗೋಪಿಯಾಗಿದ್ದು, ಮಾನಸಿಕ ಅಸ್ವಸ್ಥ ರೀತಿಯಲ್ಲಿ ವರ್ತಿಸುತ್ತಿದ್ದ ಎನ್ನಲಾಗಿದೆ, ಈತ ಮಾನಸಿಕ ಸಮತೋಲನವಿಲ್ಲದೆ ಮಾನಸಿಕವಾಗಿ ನೊಂದು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಸಿದ್ದರಾಮೇಶ್ವರ ಹಾಗೂ ಕೋಳಾಲ ಪಿಎಸ್ಐ ನವೀನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!