ಕೊರೊನಾಗೆ ನರಸಿಂಹಯ್ಯ ಬಲಿ

216

Get real time updates directly on you device, subscribe now.

ಶಿರಾ: ನಗರಸಭೆ ನಾಮಿನಿ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಸವಿತಾ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ನರಸಿಂಹಯ್ಯ (67) ಕೊರೊನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಈ ಹಿಂದೆ ತುಮಕೂರು ಜಿಲ್ಲೆಯ ಸವಿತಾ ಸಮಾಜದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು ಜಿಲ್ಲೆಯ ಸವಿತಾ ಸಮಾಜದ ಒಂದು ಶಕ್ತಿಯಾಗಿದ್ದರು. ಜಿಲ್ಲಾದ್ಯಂತ ಸುತ್ತಿ ಹಿಂದುಳಿದ ಸವಿತಾ ಸಮಾಜದ ಸಂಘಟನೆ ಮಾಡಿ ಅನೇಕ ಜನರಿಗೆ ಆಶಾಕಿರಣವಾಗಿದ್ದರು. ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದರು. ಆರೋಗ್ಯವಾಗಿಯೇ ಇದ್ದ ಇವರು ಗುರುವಾರ ರಾತ್ರಿ ಉಸಿರಾಟದ ತೊಂದರೆಯಿಂದಾಗಿ ಶ್ರೀದೇವಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು, ಇವರಿಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಇವರ ಸಾವಿನಿಂದ ಇಡೀ ಕರ್ನಾಟಕ ರಾಜ್ಯ ಸವಿತಾ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ನರಸಿಂಹಯ್ಯ ಅವರ ಆತ್ಮಕ್ಕೆ ಶಾಂತಿ ದೊರಕಿ ಅವರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ನೀಡಲಿ ಎಂದು ರಾಜ್ಯ ಸವಿತಾ ಸಮಾಜ, ಜಿಲ್ಲಾ ಸವಿತಾ ಸಮಾಜ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸವಿತಾ ಸಮಾಜದ ಬಂಧುಗಳು ಕಂಬನಿ ಮಿಡಿದಿದ್ದಾರೆ.

Get real time updates directly on you device, subscribe now.

Comments are closed.

error: Content is protected !!