ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ

204

Get real time updates directly on you device, subscribe now.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರಥಮ ಪಿಯು ಪರೀಕ್ಷೆಯನ್ನು ರದ್ದು ಪಡಿಸಿದ್ದು, ಅದರ ಜೊತೆಗೆ 24ರಿಂದ ನಡೆಯ ಬೇಕಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಮಾಡಿದ್ದಾರೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ದ್ವಿತೀಯ ಪಿಯು ಪರೀಕ್ಷೆ ಯಾವಾಗ ನಡೆಯಲಿದೆ ಎಂಬುದನ್ನು ತಿಳಿಸಲಾಗುವುದು, ಅದರಂತೆ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ನಡೆಯ ಬೇಕಿದ್ದ ಪರೀಕ್ಷೆಗಳನ್ನು ಕೋವಿಡ್ ಕಾರಣದಿಂದ ರದ್ದು ಪಡಿಸಲಾಗಿದ್ದು, ಅವರನ್ನು ತೇರ್ಗಡೆ ಮಾಡಲಾಗಿದೆ ಎಂದರು.
ದ್ವಿತೀಯ ಪಿಯು ಪರೀಕ್ಷೆ ಮುಂದೂಡಿರುವುದರಿಂದ ಉಪನ್ಯಾಸಕರು ಫೋನ್ ಮೂಲಕ ನಿರಂತರವಾಗಿ ಸಂಪರ್ಕದಲಿದ್ದು, ಅವರ ಓದಿಗೆ ಚೈತನ್ಯ ತುಂಬುವ ಕಾರ್ಯ ಮಾಡಬೇಕಿದೆ ಎಂದು ಸಲಹೆ ನೀಡಿದರು.

Get real time updates directly on you device, subscribe now.

Comments are closed.

error: Content is protected !!