ಶಾಸಕ ಜ್ಯೋತಿಗಣೇಶ್‌ ಗೆ ಕೊರೊನಾ

393

Get real time updates directly on you device, subscribe now.

ತುಮಕೂರು: ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಕಳೆದ ನಾಲ್ಕೈದು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿದ್ದವರು ತಪಾಸಣೆಗೆ ಒಳಗಾಗುವಂತೆ ಶಾಸಕ ಜ್ಯೋತಿಗಣೇಶ್‌ ಮನವಿ ಮಾಡಿದ್ದಾರೆ.
ಕೋವಿಡ್‌ ಸೋಂಕು ದೃಢಪಟ್ಟಿದ್ದರು ಸಹ ನಗರದಲ್ಲಿನ ಜನರಿಗೆ ತೊಂದರೆಯಾಗದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಮ್ಲಜನಕ ಮತ್ತು ಹಾಸಿಗೆ ವ್ಯವಸ್ಥೆಯ ಬಗ್ಗೆ ನಿರಂತರ ಮಾಹಿತಿ ಪಡೆಯುತ್ತಿದ್ದು, ಸಾರ್ವಜನಿಕರು ಭೀತಿಗೆ ಒಳಗಾಗದೆ ಸುರಕ್ಷಿತವಾಗಿ ಮನೆಯಲ್ಲಿಯೇ ಇರುವಂತೆ ವಿನಂತಿಸಿಕೊಂಡಿದ್ದಾರೆ.
ಅನಾವಶ್ಯಕವಾಗಿ ಯಾರು ಮನೆಯಿಂದ ಹೊರ ಬರದೆ ಮನೆಯಲ್ಲಿ ಉಳಿಯುವ ಮೂಲಕ ಕೊರೊನಾ ವಿರುದ್ಧ ಸಾಮೂಹಿಕವಾಗಿ ಹೋರಾಡಬೇಕಾದ ಅವಶ್ಯಕತೆ ಇದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಉಳಿಯಲು ಅವಕಾಶವಿರುವುದರಿಂದ ಮನೆಯಲ್ಲಿಯೆ ಉಳಿದು ಚಿಕಿತ್ಸೆ ಪಡೆದುಕೊಳ್ಳಬಹುದಾಗಿದ್ದು, ಉಸಿರಾಟದ ತೊಂದರೆ ಕಂಡು ಬಂದರೆ ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!