ಜಿಪಂ ಸದಸ್ಯ ಮಹಾಲಿಂಗಯ್ಯ ನಿಧನ

263

Get real time updates directly on you device, subscribe now.

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಜಿಪಂ ಸದಸ್ಯ ಎಸ್.ಟಿ.ಮಹಾಲಿಂಗಯ್ಯ (64) ಅವರು ಬೆಂಗಳೂರು ಅಪೋಲೊ ಆಸ್ಪತ್ರೆಯಲ್ಲಿ ಹೃದಘಾತದಿಂದ ನಿಧನರಾಗಿದ್ದು ಕರೊನಾ ದೃಡಪಟ್ಟಿತ್ತು ಎಂದು ತಿಳಿದು ಬಂದಿದೆ.
ರಾಷ್ಟ್ರಿಯ ಕಬಡ್ಡಿ ಪಟುವಾಗಿದ್ದ ಮೃತರು ಕ್ರೀಡಾ ಕೋಟದಲ್ಲಿ ಕೇಂದ್ರ ಸರ್ಕಾರಿ ನೌಕರಿ ಪಡೆದಿದ್ದರು. ಕಸ್ಟಮ್ಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಪಕ್ಷದಿಂದ ಹೊಯ್ಸಲಕಟ್ಟೆ ಜಿಪಂ ಚುನಾವಣೆಗೆ ನಿಂತು ಗೆದ್ದಿದ್ದರು.
ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಚಿಕ್ಕನಾಯಕಹಳ್ಳಿ ಸಮೀಪದ ಸಾಲ್ಕಟ್ಟೆಯಲ್ಲಿನ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿತು.
ಸಚಿವ ಮಾಧುಸ್ವಾಮಿ, ಮಾಜಿ ಶಾಸಕ ಕಿರಣ್ ಕುಮಾರ್ ಹಾಗೂ ಹಾಲಿ ಜಿಪಂ ಸದಸ್ಯರುಗಳು ಸಂತಾಪ ಸೂಚಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!