ಕೋವಿಡ್ ಗೆ ಗ್ರಾಮ ಸಹಾಯಕ ಬಲಿ

252

Get real time updates directly on you device, subscribe now.

ತುರುವೇಕೆರೆ: ತಾಲೂಕಿನ ದಬ್ಬೇಘಟ್ಟ ಹೋಬಳಿ ನಾಗಲಪುರ ವೃತ್ತದ ಗ್ರಾಮ ಸಹಾಯಕರಾಗಿದ್ದ ಮಂಜಯ್ಯ(40) ಕೊವಿಡ್‌ನಿಂದ ಸೋಮವಾರ ನಿಧನರಾಗಿದ್ದಾರೆ.
ಕೋವಿಡ್‌ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜಯ್ಯಗೆ ಈಚೆಗೆ ಕೊರೊನಾ ಸೋಂಕು ತಗುಲಿತ್ತು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ನಿಧನರಾದರು. ಮೃತ ಮಂಜಯ್ಯ ಅವರು ಪತ್ನಿ, ಓರ್ವ ಪುತ್ರಿ ಹಾಗು ಪುತ್ರ, ಬಂಧು ಬಾಂಧವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಆರ್‌.ಎಸ್‌. ಕಾರ್ಯಕರ್ತರು ಅವರ ಸ್ವಗ್ರಾಮದಲ್ಲಿ ನೆರವೇರಿಸಿದರು. ಮಂಜಯ್ಯ ನಿಧನಕ್ಕೆ ತಾಲೂಕು ಗ್ರಾಮ ಸಹಾಯಕರ ಸಂಘ ಹಾಗೂ ಕಂದಾಯ ಇಲಾಖಾ ನೌಕರರು ಸಂತಾಪ ಸೂಚಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!