ಅಗ್ನಿ ಅವಘಡ- ಮಹಿಳೆ ಸಾವು

316

Get real time updates directly on you device, subscribe now.

ಕೊರಟಗೆರೆ: ಸ್ನಾನಕ್ಕಾಗಿ ಬಿಸಿನೀರು ಕಾಯಿಸಲು ಹಂಡೆ ಒಲೆಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಗಾಯಗಳಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ನಡೆದಿದೆ.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತಿಮ್ಮಸಂದ್ರ ಗ್ರಾಮದ ರವಿಕುಮಾರ್‌ ಎಂಬಾತನ ಮಡದಿ ಜ್ಯೋತಿ (22) ಮೃತ ದುರ್ದೈವಿ. ತಾಯಿಯ ಜೊತೆಯಲ್ಲಿದ್ದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಕೊರಟಗೆರೆ ಸಿಪಿಐ ಸಿದ್ದರಾಮೇಶ್ವರ ಮತ್ತು ಕೋಳಾಲ ಪಿಎಸೈ ಮಹಾಲಕ್ಷ್ಮೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ಕೋಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!